ಬ್ರೇಕಿಂಗ್ ನ್ಯೂಸ್
29-09-20 01:10 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಕೋವಿಡ್ 19 ಲಾಕ್ಡೌನ್ ಮತ್ತು ಅನ್ಲಾಕ್ ನಂತರವೂ ಬಹುತೇಕ ಜನರು ಹೊಸ ಕಾರು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹಳೆ ಕಾರುಗಳಿಗೆ ಒಮ್ಮೆಲೇ ಡಿಮ್ಯಾಂಡ್ ಹೆಚ್ಚಿದೆ.
ಮಾರುಕಟ್ಟೆಯಲ್ಲಿ ಐದು ಲಕ್ಷದೊಳಗಿನ ಹಳೆ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಹಳೆಯ ಕಾರುಗಳ ಕೊರತೆ ಉಂಟಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಎರಡು ಲಕ್ಷದೊಳಗಿನ ಕಾರುಗಳಿಗಂತೂ ಭಾರೀ ಬೇಡಿಕೆ ಬಂದಿದೆ. 3 ರಿಂದ 5 ಲಕ್ಷದ ವರೆಗಿನ ಕಾರುಗಳಿಗೂ ಬೇಡಿಕೆ ಇದ್ದು ಬಹುತೇಕ ಜನರು ಈ ಬಗ್ಗೆ ವಿಚಾರಿಸುತ್ತಿದ್ದಾರೆ.

ಹಳೆ ಕಾರುಗಳನ್ನು ಸಾಧಾರಣ ಬೆಂಗಳೂರಿನಿಂದಲೇ ಹೆಚ್ಚಾಗಿ ತರಿಸಿಕೊಳ್ಳುತ್ತಿದ್ದೇವೆ. ಆದರೆ ಅಲ್ಲಿಯೂ ಕಾರುಗಳನ್ನು ಮಾರುವುದಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಹಳೆಯ ಕಾರುಗಳ ಪೂರೈಕೆ ನಿಂತು ಹೋಗಿದೆ ಎಂದು ಹಳೆಯ ಕಾರುಗಳ ಏಜೆಂಟ್ ಒಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂಜರಿಯುತ್ತಿದ್ದಾರೆ. ಬದಲಿಗೆ ಸಣ್ಣ ಕಾರು ಇದ್ದರೆ ಆಗಬಹುದು ಎಂದು ಹುಡುಕಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಹಳೆ ಕಾರುಗಳಿಗೆ ಬೇಡಿಕೆ ಕಂಡುಬಂದಿದೆ. ಇಎಂಐ ಪಾವತಿಸಲು ಸಾಧ್ಯವಾಗದ ಜನರು ಮಾತ್ರ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೊಸ ಕಾರು ಖರೀದಿಗಾಗಿ ಯಾರು ಮುಂದಾಗುತ್ತಿಲ್ಲ ಎನ್ನುವುದು ಕಾರ್ ಡೀಲರ್ ಒಬ್ಬರ ಮಾತು.
ಕಾರುಗಳ ಜೊತೆಗೆ ಹಳೆಯ ಬೈಕ್ ಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳು ಬೈಕ್ ಡೀಲರ್ ಗಳ ಬಳಿ ನೋಂದಣಿ ಮಾಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದರಿಂದಾಗಿ ಸ್ಕ್ರಾಪ್ ಹೋಗಿದ್ದ ಬೈಕ್ ಗಳನ್ನೂ ಗ್ಯಾರೇಜ್ ಗಳಲ್ಲಿ ದುರಸ್ತಿ ಮಾಡಿ ಮಾರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm