ಬ್ರೇಕಿಂಗ್ ನ್ಯೂಸ್
29-09-20 01:10 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಕೋವಿಡ್ 19 ಲಾಕ್ಡೌನ್ ಮತ್ತು ಅನ್ಲಾಕ್ ನಂತರವೂ ಬಹುತೇಕ ಜನರು ಹೊಸ ಕಾರು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹಳೆ ಕಾರುಗಳಿಗೆ ಒಮ್ಮೆಲೇ ಡಿಮ್ಯಾಂಡ್ ಹೆಚ್ಚಿದೆ.
ಮಾರುಕಟ್ಟೆಯಲ್ಲಿ ಐದು ಲಕ್ಷದೊಳಗಿನ ಹಳೆ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಹಳೆಯ ಕಾರುಗಳ ಕೊರತೆ ಉಂಟಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಎರಡು ಲಕ್ಷದೊಳಗಿನ ಕಾರುಗಳಿಗಂತೂ ಭಾರೀ ಬೇಡಿಕೆ ಬಂದಿದೆ. 3 ರಿಂದ 5 ಲಕ್ಷದ ವರೆಗಿನ ಕಾರುಗಳಿಗೂ ಬೇಡಿಕೆ ಇದ್ದು ಬಹುತೇಕ ಜನರು ಈ ಬಗ್ಗೆ ವಿಚಾರಿಸುತ್ತಿದ್ದಾರೆ.

ಹಳೆ ಕಾರುಗಳನ್ನು ಸಾಧಾರಣ ಬೆಂಗಳೂರಿನಿಂದಲೇ ಹೆಚ್ಚಾಗಿ ತರಿಸಿಕೊಳ್ಳುತ್ತಿದ್ದೇವೆ. ಆದರೆ ಅಲ್ಲಿಯೂ ಕಾರುಗಳನ್ನು ಮಾರುವುದಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಹಳೆಯ ಕಾರುಗಳ ಪೂರೈಕೆ ನಿಂತು ಹೋಗಿದೆ ಎಂದು ಹಳೆಯ ಕಾರುಗಳ ಏಜೆಂಟ್ ಒಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂಜರಿಯುತ್ತಿದ್ದಾರೆ. ಬದಲಿಗೆ ಸಣ್ಣ ಕಾರು ಇದ್ದರೆ ಆಗಬಹುದು ಎಂದು ಹುಡುಕಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಹಳೆ ಕಾರುಗಳಿಗೆ ಬೇಡಿಕೆ ಕಂಡುಬಂದಿದೆ. ಇಎಂಐ ಪಾವತಿಸಲು ಸಾಧ್ಯವಾಗದ ಜನರು ಮಾತ್ರ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೊಸ ಕಾರು ಖರೀದಿಗಾಗಿ ಯಾರು ಮುಂದಾಗುತ್ತಿಲ್ಲ ಎನ್ನುವುದು ಕಾರ್ ಡೀಲರ್ ಒಬ್ಬರ ಮಾತು.
ಕಾರುಗಳ ಜೊತೆಗೆ ಹಳೆಯ ಬೈಕ್ ಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳು ಬೈಕ್ ಡೀಲರ್ ಗಳ ಬಳಿ ನೋಂದಣಿ ಮಾಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದರಿಂದಾಗಿ ಸ್ಕ್ರಾಪ್ ಹೋಗಿದ್ದ ಬೈಕ್ ಗಳನ್ನೂ ಗ್ಯಾರೇಜ್ ಗಳಲ್ಲಿ ದುರಸ್ತಿ ಮಾಡಿ ಮಾರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm