ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.





ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am