ಬ್ರೇಕಿಂಗ್ ನ್ಯೂಸ್
22-06-22 06:52 pm Mangalore Correspondent ಕರಾವಳಿ
ಉಳ್ಳಾಲ, ಜೂ.22 : 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಸತತವಾಗಿ ಗೈರು ಹಾಜರಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಸಾಮಾಜಿಕ ಕಾರ್ಯಕರ್ತ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಕಬೀರ್ ಉಳ್ಳಾಲ್ 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿದಂತೆ ಜಯಂತ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡ ಕಾರಣಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

15 ವರ್ಷಗಳ ಹಿಂದೆ ರೌಡಿ ನಿಗ್ರಹದಳದ ಮುಖ್ಯಸ್ಥರಾಗಿದ್ದ ಇನ್ಸ್ ಪೆಕ್ಟರ್ ಜಯಂತ್ ಶೆಟ್ಟಿ ಮತ್ತವರ ಸಿಬ್ಬಂದಿಗಳು ಉಳ್ಳಾಲ ಪರಿಸರದಲ್ಲಿ ದಾಳಿ ನಡೆಸಿ ಅಮಾಯಕರನ್ನು ಬಂಧಿಸಿದ್ದರು. ಪೊಲೀಸರ ದೌರ್ಜನ್ಯದ ವಿರುದ್ಧ ಕಾನೂನು ಹೋರಾಟ ನಡೆಸಿದ್ದಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗಿತ್ತು. 2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿ ನನ್ನನ್ನು ಪೊಲೀಸರು ಬಂಧಿಸಿ, ಬಳ್ಳಾರಿ ಜೈಲಿಗೆ ತಳ್ಳಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡು ಜಯಂತ್ ಶೆಟ್ಟಿ ಮತ್ತು ಉಳ್ಳಾಲ ಪಿಎಸ್ಐ ಶಿವಪ್ರಕಾಶ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾಗಿ ಕಬೀರ್ ಉಳ್ಳಾಲ್ ತಿಳಿಸಿದ್ದಾರೆ.

ಕೋರ್ಟಿನಲ್ಲಿ ಸತತ ಹೋರಾಟ ನಡೆಸಿದ ಫಲವಾಗಿ ಶಿವಪ್ರಕಾಶ್ ಜಾಮೀನು ಪಡೆದರೆ, ಜಯಂತ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಪದೇ ಪದೇ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದರೂ, ಬರದೇ ಇರುವುದರಿಂದ ಜೂ.20ರಂದು ಮಂಗಳೂರಿನ ನ್ಯಾಯಾಲಯ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ. ದೂರುದಾರ ಪರವಾಗಿ ಹಿರಿಯ ನ್ಯಾಯವಾದಿ ಎಸ್.ಎಸ್. ಖಾಝಿ ವಾದಿಸಿದ್ದರು.
Mangalore Court issues non bailable warrant against former cop Jayanth Shetty in Kabeer Ullal case. in a 14-year-old case for repeatedly skipping appearing in court despite summons. The case pertains to a private complaint filed by activist Kabeer Ullal in 2008 when the officer was serving as the head of anti-rowdy squad. Kabeer alleged Jayanth Shetty and other police personnel used to target innocent people from Ullal.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am