ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.

ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm