ಬ್ರೇಕಿಂಗ್ ನ್ಯೂಸ್
30-09-20 03:45 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅ.1ರಿಂದ ಮಂಗಳೂರು - ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ದರ್ಜೆಯ ಬಸ್ ಹಾಗೂ ಉಡುಪಿ - ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಪ್ರಾರಂಭಿಸಲಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಯಾಣಿಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ಬಸ್ ಮಧ್ಯಾಹ್ನ 3ಕ್ಕೆ ಮಂಗಳೂರಿನಿಂದ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 8.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5ಕ್ಕೆ ಹೊರಟು ಅದೇ ಮಾರ್ಗವಾಗಿ ಮಂಗಳೂರಿಗೆ ಮರುದಿನ ಬೆಳಗ್ಗೆ 10 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,700 ರೂ. ಆಗಿರುತ್ತದೆ.

ರಾಜಹಂಸ ಬಸ್ ಉಡುಪಿಯಿಂದ ಬೆಳಗ್ಗೆ 11.30ಕ್ಕೆ ಹೊರಟು ಮಣಿಪಾಲ, ಕುಂದಾಪುರ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹರಿಹರ, ಹರಪನಹಳ್ಳಿ, ಹೊಸಪೇಟೆ, ಗಂಗಾವತಿ, ಮಾನ್ವಿ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 6.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5.30ಕ್ಕೆ ಹೊರಟು ಉಡುಪಿಗೆ ಮರುದಿನ ಬೆಳಗ್ಗೆ 11 ಗಂಟೆಗೆ ತಲುಪಲಿದೆ. ಪ್ರಯಾಣ ದರ 970 ರೂ. ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm