ಬ್ರೇಕಿಂಗ್ ನ್ಯೂಸ್
24-06-22 08:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಮಂಗಳೂರು ನಗರದಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎನ್ನೋದು ಬಹುದಿನಗಳ ಕನಸು. ಈ ಕನಸು ಕಡೆಗೂ ಈಡೇರುವ ಕಾಲ ಬಂದಿದೆ. ಇಬ್ಬರು ದೆಹಲಿ ಪತ್ರಕರ್ತರ ಕೋರಿಕೆಯ ಮೇರೆಗೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಪುಷ್ಪಾ ವಿ.ಎಸ್., ಕೆಎಸ್ಸಾರ್ಟಿಸಿ ಸಾರಿಗೆ ನಿಗಮಕ್ಕೆ ಆದೇಶ ಪತ್ರ ನೀಡಿದ್ದು ತುರ್ತಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಾನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಬಸ್ ವ್ಯವಸ್ಥೆ ಇರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಜಯವಾಣಿ ಮತ್ತು ಪವರ್ ಟಿವಿ ದೆಹಲಿ ಪ್ರತಿನಿಧಿಗಳು ಕರ್ನಾಟಕದ ಸಾರಿಗೆ ಸಚಿವ ಶ್ರೀರಾಮುಲುಗೆ ಮನವಿ ನೀಡಿದ್ದರು.

ಈ ಬಗ್ಗೆ ನೀಡಿರುವ ಆದೇಶ ಪತ್ರದಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಇರುವ ಮೂರು ಬಸ್ಸುಗಳನ್ನು ಎರವಲು ಪಡೆದು ಮಂಗಳೂರಿನಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಬೆಂಗಳೂರಿನ ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಹಲವು ಬಸ್ ಗಳನ್ನು ಮೊಟಕು ಮಾಡಿದ್ದು ಅವನ್ನು ಬೇರೆ ನಿಗಮಗಳಿಗೆ ಅಗತ್ಯವಿದ್ದರೆ ಬಳಸಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕಾಗಿ ಬೇರೆ ನಿಗಮದವರು ಒಂದು ಲಕ್ಷ ರು.ಗೆ ಹಳೆ ಬಸ್ ಗಳನ್ನು ಪಡೆಯಬಹುದು ಎಂದು ಅಲ್ಲಿನ ವ್ಯವಸ್ಥಾಪಕರು ಇತ್ತೀಚೆಗೆ ಮಾಹಿತಿ ನೀಡಿದ್ದು ಸುದ್ದಿಯಾಗಿತ್ತು. ಇದಕ್ಕೆ ಪೂರಕವಾಗಿ ಈಗ ಮಂಗಳೂರಿನಲ್ಲಿ ಬಿಎಂಟಿಸಿ ಬಸ್ ತಂದು ಓಡಿಸುವಂತೆ ಸ್ವತಃ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
KSRTC to introduce Buses to Mangalore International Airport from the city just as in Bangalore. On the request by two journalists in Delhi this request has been accepted by the transport department and an order has been issued for the same.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm