ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.


ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.


ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am