ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.


ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.


ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm