ಬ್ರೇಕಿಂಗ್ ನ್ಯೂಸ್
04-07-22 10:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಕುಳೂರು ಬಿಜೆಪಿ ಶಕ್ತಿಕೇಂದ್ರದ ಸಕ್ರಿಯ ಕಾರ್ಯಕರ್ತ, ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚೇತನ್ ಕುಮಾರ್ (27) ಎಂಬ ಯುವಕನ ಶವ ಕುಳೂರು ಸೇತುವೆಯ ಬಳಿ ನದಿಯಲ್ಲಿ ಪತ್ತೆಯಾಗಿದೆ.
ಕುಳೂರು ನಿವಾಸಿಯಾಗಿದ್ದ ಚೇತನ್ ಕುಮಾರ್ ಮೆಕ್ಯಾನಿಕಲ್ ಡಿಪ್ಲೊಮಾ ಪೂರೈಸಿ ಬೈಕಂಪಾಡಿಯ ಸಿಗ್ನೆಟ್ ಕೆಂಟ್ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದ. ಏಳು ವರ್ಷಗಳಿಂದಲೂ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದ ಚೇತನ್ ಗೆ ಹಣಕಾಸು ತೊಂದರೆ ಇರಲಿಲ್ಲ. ಬೇರಾವುದೇ ಚಟ, ಹವ್ಯಾಸವೂ ಇರಲಿಲ್ಲ. ಆದರೆ ಜುಲೈ 2ರಂದು ಸಂಜೆ ಯುವಕ ದಿಢೀರ್ ನಾಪತ್ತೆಯಾಗಿದ್ದು ಮನೆಯವರನ್ನಲ್ಲದೆ, ಅಲ್ಲಿನ ಯುವಕರನ್ನೂ ದಂಗುಬಡಿಸಿತ್ತು. ಹೀಗಾಗಿ ಚೇತನ್ ನಾಪತ್ತೆಯಾದ ವಿಚಾರವೇ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.
ಇದೀಗ ಮೃತದೇಹ ನದಿಯಲ್ಲಿ ಸಿಗುತ್ತಲೇ ಮನೆಯವರು ಅದನ್ನು ದೃಢಪಡಿಸಿದ್ದಾರೆ. ಅಲ್ಲದೆ, ಸಾವಿನಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ಹೇಳಿದ್ದಾರೆ. ಆತನ ಗೆಳೆಯರ ಮಾಹಿತಿ ಪ್ರಕಾರ, ಇತ್ತೀಚೆಗೆ ಸ್ವಲ್ಪ ಹಣಕಾಸಿನ ತೊಂದರೆಗೆ ಈಡಾಗಿದ್ದ. ಹಣ ಪಡೆದಿದ್ದವರು ಹಿಂತಿರುಗಿಸದೆ ಕೈಕೊಟ್ಟಿದ್ದರು. ಕೈಸಾಲ ಪಡೆದು ತೀರಿಸಲಾಗದೆ ಚಿಂತೆಗೆ ಒಳಗಾಗಿದ್ದ. ಇತ್ತೀಚೆಗೆ ಕಂಪನಿಯಲ್ಲಿದ್ದ ಉದ್ಯೋಗವನ್ನೂ ಕಳಕೊಂಡಿದ್ದ. ಇದರ ಚಿಂತೆಯಿಂದ ಮನೆಯಲ್ಲಿ ಖಿನ್ನನಾಗಿರುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ.
ಹೆತ್ತವರ ನಾಲ್ಕು ಗಂಡು ಮಕ್ಕಳಲ್ಲಿ ಮೂರನೇಯನಾಗಿರುವ ಚೇತನ್ ಕುಮಾರ್, ಸಾವಿನ ಬಗ್ಗೆ ಜೊತೆಗಿದ್ದ ಯುವಕರಲ್ಲೇ ಅನುಮಾನ ಮೂಡಿಸಿತ್ತು. ಅಂಥಹದ್ದೇನೂ ಆಪತ್ತು, ತೊಂದರೆ ಇಲ್ಲದ ಯುವಕ ಯಾಕಾಗಿ ಸಾವು ಕಂಡ ಅನ್ನುವ ಪ್ರಶ್ನೆ ಮಾಡುತ್ತಿದ್ದರು. ಹಿಂದು ಸಂಘಟನೆ, ಬಿಜೆಪಿಯಲ್ಲಿ ಸಕ್ರಿಯವಾಗಿದ್ದಾತ ಹಠಾತ್ತಾಗಿ ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಕಾವೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಲವ್ ಅಫೇರ್ ಇತ್ತೇ, ಕೈಸಾಲ ಇತ್ತೇ ಅಥವಾ ಬೇರೆ ಯಾವುದಾದ್ರೂ ಚಟಕ್ಕೆ ಅಂಟಿಕೊಂಡಿದ್ದನೇ ಅನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.
A youth from Kavoor, who went missing two days ago, was found dead on Monday, July 4. The deceased is identified as Chethan Kumar (27), a resident of Kavoor. Chethan was active in betting and had lost too much of money which has lead to for suicide. He went missing two days ago and a complaint was filed in Kavoor police station by the family members.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm