ಬ್ರೇಕಿಂಗ್ ನ್ಯೂಸ್
01-10-20 03:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 1: ಕರೊನಾ ವೈರಸ್ಗೆ ಇಡೀ ಮಾನವ ಸಂಕುಲವೇ ನಡುಗುತ್ತಿದ್ದರೆ, ಇತ್ತ ಹಳ್ಳಿ ಪ್ರದೇಶಗಳಲ್ಲಿ ನಾಯಿಗಳಿಗೆ ಮಿದುಳು ಜ್ವರ ಕಾಣಿಸಿಕೊಂಡಿದ್ದು ಸಾಮೂಹಿಕವಾಗಿ ಬಲಿಯಾಗುತ್ತಿವೆ.
ಬೀದಿ ನಾಯಿಗಳಲ್ಲಿ ಹೆಚ್ಚಾಗಿ ಈ ವೈರಸ್ ಕಾಣಿಸಿಕೊಂಡು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ರೋಗಕ್ಕೆ ನಾಯಿಗಳು ಬಲಿಯಾಗುತ್ತಿವೆ. ಪರಿಣಾಮ ಸಾಕು ನಾಯಿಗಳಿಗೂ ಈ ರೋಗ ಆವರಿಸುವ ಸಾಧ್ಯತೆ ಕಂಡುಬಂದಿದ್ದು ಜನರಲ್ಲಿ ಭೀತಿ ಕಾಡಲಾರಂಭಿಸಿದೆ. ಇದೊಂದು ವೈರಸ್ ದಾಳಿಯಾಗಿದ್ದು ಮೂರು ತಿಂಗಳ ಮೊದಲೇ ನಾಯಿಗಳು ರೋಗಕ್ಕೆ ತುತ್ತಾದರೂ ಆರಂಭದಲ್ಲಿ ಯಾವುದೇ ಲಕ್ಷಣ ಗೋಚರಿಸುವುದಿಲ್ಲ. ಕೊನೆಯ ಹತ್ತರಿಂದ ಹದಿನೈದು ದಿನಗಳಲ್ಲಿ ರೋಗ ಉಲ್ಭಣಿಸಿ ನಾಯಿಗಳು ಸಾವನ್ನಪ್ಪುತ್ತವೆ.

ವೈರಸ್ಗೆ ತುತ್ತಾದ ನಾಯಿಗಳು ರೇಬಿಸ್ ಪೀಡಿತ ನಾಯಿಯಂತೆ ವರ್ತಿಸುತ್ತಿದ್ದು, ಸಾಕು ನಾಯಿಗಳ ಮೇಲೆ ದಾಳಿ ಮಾಡುತ್ತವೆ. ಆ ಮೂಲಕ ರೋಗ ಒಂದರಿಂದ ಇನ್ನೊಂದಕ್ಕೆ ಹರಡುತ್ತಿದ್ದು, ಸಾಕುನಾಯಿ ಮಾಲೀಕರನ್ನು ಆತಂಕಕ್ಕೀಡು ಮಾಡುತ್ತಿದೆ. ಮೂಗಿನಿಂದ ಕೀವು ಬರಲು ಆರಂಭವಾಗುತ್ತದೆ ಮತ್ತು ಬಾಯಿಯಿಂದಲೂ ಕೀವು ಮಿಶ್ರಿತ ನೀರು ನಾಯಿ ಸಂಚರಿಸಿದ ಉದ್ದಕ್ಕೂ ಬೀಳುವುದರ ಪರಿಣಾಮ ರೋಗ ಹರಡುತ್ತದೆ. ಇಂಥ ಮಿದುಳು ಜ್ವರದ ಹಾವಳಿ ಈಗ ಪುತ್ತೂರು, ಸುಳ್ಯದಲ್ಲಿ ಹೆಚ್ಚಿದ್ದು ಜನರಲ್ಲಿ ಭೀತಿ ಮೂಡಿಸಿದೆ.
ಈ ರೋಗದಿಂದ ಮನುಷ್ಯರಿಗೆ ಅಪಾಯವಿಲ್ಲ. ಬೇಸಿಗೆಯಲ್ಲಿ ರೋಗ ಹೆಚ್ಚಾಗಿ ಉಲ್ಭಣಿಸುತ್ತದೆ. ರೋಗ ಬಾರದಂತೆ ಆರಂಭದಲ್ಲಿ 60 ದಿನಗಳ ಮರಿಗಳಿಗೆ ಡಿಸ್ಟೆಂಪರ್ ವ್ಯಾಕ್ಸೀನ್ ನೀಡಬೇಕಾಗುತ್ತದೆ. ಬಳಿಕ 90 ದಿನ ಹಾಗೂ ನಂತರ ಪ್ರತಿ ವರ್ಷಕ್ಕೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದರ ಮೂಲಕ ನಾಯಿಗಳನ್ನು ರೋಗದಿಂದ ರಕ್ಷಿಸಬಹುದು ಪಶು ವೈದ್ಯ ಡಾ.ಧರ್ಮಪಾಲ ಹೇಳುತ್ತಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm