ಬ್ರೇಕಿಂಗ್ ನ್ಯೂಸ್
01-10-20 03:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 1: ಕರೊನಾ ವೈರಸ್ಗೆ ಇಡೀ ಮಾನವ ಸಂಕುಲವೇ ನಡುಗುತ್ತಿದ್ದರೆ, ಇತ್ತ ಹಳ್ಳಿ ಪ್ರದೇಶಗಳಲ್ಲಿ ನಾಯಿಗಳಿಗೆ ಮಿದುಳು ಜ್ವರ ಕಾಣಿಸಿಕೊಂಡಿದ್ದು ಸಾಮೂಹಿಕವಾಗಿ ಬಲಿಯಾಗುತ್ತಿವೆ.
ಬೀದಿ ನಾಯಿಗಳಲ್ಲಿ ಹೆಚ್ಚಾಗಿ ಈ ವೈರಸ್ ಕಾಣಿಸಿಕೊಂಡು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ರೋಗಕ್ಕೆ ನಾಯಿಗಳು ಬಲಿಯಾಗುತ್ತಿವೆ. ಪರಿಣಾಮ ಸಾಕು ನಾಯಿಗಳಿಗೂ ಈ ರೋಗ ಆವರಿಸುವ ಸಾಧ್ಯತೆ ಕಂಡುಬಂದಿದ್ದು ಜನರಲ್ಲಿ ಭೀತಿ ಕಾಡಲಾರಂಭಿಸಿದೆ. ಇದೊಂದು ವೈರಸ್ ದಾಳಿಯಾಗಿದ್ದು ಮೂರು ತಿಂಗಳ ಮೊದಲೇ ನಾಯಿಗಳು ರೋಗಕ್ಕೆ ತುತ್ತಾದರೂ ಆರಂಭದಲ್ಲಿ ಯಾವುದೇ ಲಕ್ಷಣ ಗೋಚರಿಸುವುದಿಲ್ಲ. ಕೊನೆಯ ಹತ್ತರಿಂದ ಹದಿನೈದು ದಿನಗಳಲ್ಲಿ ರೋಗ ಉಲ್ಭಣಿಸಿ ನಾಯಿಗಳು ಸಾವನ್ನಪ್ಪುತ್ತವೆ.

ವೈರಸ್ಗೆ ತುತ್ತಾದ ನಾಯಿಗಳು ರೇಬಿಸ್ ಪೀಡಿತ ನಾಯಿಯಂತೆ ವರ್ತಿಸುತ್ತಿದ್ದು, ಸಾಕು ನಾಯಿಗಳ ಮೇಲೆ ದಾಳಿ ಮಾಡುತ್ತವೆ. ಆ ಮೂಲಕ ರೋಗ ಒಂದರಿಂದ ಇನ್ನೊಂದಕ್ಕೆ ಹರಡುತ್ತಿದ್ದು, ಸಾಕುನಾಯಿ ಮಾಲೀಕರನ್ನು ಆತಂಕಕ್ಕೀಡು ಮಾಡುತ್ತಿದೆ. ಮೂಗಿನಿಂದ ಕೀವು ಬರಲು ಆರಂಭವಾಗುತ್ತದೆ ಮತ್ತು ಬಾಯಿಯಿಂದಲೂ ಕೀವು ಮಿಶ್ರಿತ ನೀರು ನಾಯಿ ಸಂಚರಿಸಿದ ಉದ್ದಕ್ಕೂ ಬೀಳುವುದರ ಪರಿಣಾಮ ರೋಗ ಹರಡುತ್ತದೆ. ಇಂಥ ಮಿದುಳು ಜ್ವರದ ಹಾವಳಿ ಈಗ ಪುತ್ತೂರು, ಸುಳ್ಯದಲ್ಲಿ ಹೆಚ್ಚಿದ್ದು ಜನರಲ್ಲಿ ಭೀತಿ ಮೂಡಿಸಿದೆ.
ಈ ರೋಗದಿಂದ ಮನುಷ್ಯರಿಗೆ ಅಪಾಯವಿಲ್ಲ. ಬೇಸಿಗೆಯಲ್ಲಿ ರೋಗ ಹೆಚ್ಚಾಗಿ ಉಲ್ಭಣಿಸುತ್ತದೆ. ರೋಗ ಬಾರದಂತೆ ಆರಂಭದಲ್ಲಿ 60 ದಿನಗಳ ಮರಿಗಳಿಗೆ ಡಿಸ್ಟೆಂಪರ್ ವ್ಯಾಕ್ಸೀನ್ ನೀಡಬೇಕಾಗುತ್ತದೆ. ಬಳಿಕ 90 ದಿನ ಹಾಗೂ ನಂತರ ಪ್ರತಿ ವರ್ಷಕ್ಕೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದರ ಮೂಲಕ ನಾಯಿಗಳನ್ನು ರೋಗದಿಂದ ರಕ್ಷಿಸಬಹುದು ಪಶು ವೈದ್ಯ ಡಾ.ಧರ್ಮಪಾಲ ಹೇಳುತ್ತಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm