ಬ್ರೇಕಿಂಗ್ ನ್ಯೂಸ್
01-10-20 03:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 1: ಕರೊನಾ ವೈರಸ್ಗೆ ಇಡೀ ಮಾನವ ಸಂಕುಲವೇ ನಡುಗುತ್ತಿದ್ದರೆ, ಇತ್ತ ಹಳ್ಳಿ ಪ್ರದೇಶಗಳಲ್ಲಿ ನಾಯಿಗಳಿಗೆ ಮಿದುಳು ಜ್ವರ ಕಾಣಿಸಿಕೊಂಡಿದ್ದು ಸಾಮೂಹಿಕವಾಗಿ ಬಲಿಯಾಗುತ್ತಿವೆ.
ಬೀದಿ ನಾಯಿಗಳಲ್ಲಿ ಹೆಚ್ಚಾಗಿ ಈ ವೈರಸ್ ಕಾಣಿಸಿಕೊಂಡು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ರೋಗಕ್ಕೆ ನಾಯಿಗಳು ಬಲಿಯಾಗುತ್ತಿವೆ. ಪರಿಣಾಮ ಸಾಕು ನಾಯಿಗಳಿಗೂ ಈ ರೋಗ ಆವರಿಸುವ ಸಾಧ್ಯತೆ ಕಂಡುಬಂದಿದ್ದು ಜನರಲ್ಲಿ ಭೀತಿ ಕಾಡಲಾರಂಭಿಸಿದೆ. ಇದೊಂದು ವೈರಸ್ ದಾಳಿಯಾಗಿದ್ದು ಮೂರು ತಿಂಗಳ ಮೊದಲೇ ನಾಯಿಗಳು ರೋಗಕ್ಕೆ ತುತ್ತಾದರೂ ಆರಂಭದಲ್ಲಿ ಯಾವುದೇ ಲಕ್ಷಣ ಗೋಚರಿಸುವುದಿಲ್ಲ. ಕೊನೆಯ ಹತ್ತರಿಂದ ಹದಿನೈದು ದಿನಗಳಲ್ಲಿ ರೋಗ ಉಲ್ಭಣಿಸಿ ನಾಯಿಗಳು ಸಾವನ್ನಪ್ಪುತ್ತವೆ.

ವೈರಸ್ಗೆ ತುತ್ತಾದ ನಾಯಿಗಳು ರೇಬಿಸ್ ಪೀಡಿತ ನಾಯಿಯಂತೆ ವರ್ತಿಸುತ್ತಿದ್ದು, ಸಾಕು ನಾಯಿಗಳ ಮೇಲೆ ದಾಳಿ ಮಾಡುತ್ತವೆ. ಆ ಮೂಲಕ ರೋಗ ಒಂದರಿಂದ ಇನ್ನೊಂದಕ್ಕೆ ಹರಡುತ್ತಿದ್ದು, ಸಾಕುನಾಯಿ ಮಾಲೀಕರನ್ನು ಆತಂಕಕ್ಕೀಡು ಮಾಡುತ್ತಿದೆ. ಮೂಗಿನಿಂದ ಕೀವು ಬರಲು ಆರಂಭವಾಗುತ್ತದೆ ಮತ್ತು ಬಾಯಿಯಿಂದಲೂ ಕೀವು ಮಿಶ್ರಿತ ನೀರು ನಾಯಿ ಸಂಚರಿಸಿದ ಉದ್ದಕ್ಕೂ ಬೀಳುವುದರ ಪರಿಣಾಮ ರೋಗ ಹರಡುತ್ತದೆ. ಇಂಥ ಮಿದುಳು ಜ್ವರದ ಹಾವಳಿ ಈಗ ಪುತ್ತೂರು, ಸುಳ್ಯದಲ್ಲಿ ಹೆಚ್ಚಿದ್ದು ಜನರಲ್ಲಿ ಭೀತಿ ಮೂಡಿಸಿದೆ.
ಈ ರೋಗದಿಂದ ಮನುಷ್ಯರಿಗೆ ಅಪಾಯವಿಲ್ಲ. ಬೇಸಿಗೆಯಲ್ಲಿ ರೋಗ ಹೆಚ್ಚಾಗಿ ಉಲ್ಭಣಿಸುತ್ತದೆ. ರೋಗ ಬಾರದಂತೆ ಆರಂಭದಲ್ಲಿ 60 ದಿನಗಳ ಮರಿಗಳಿಗೆ ಡಿಸ್ಟೆಂಪರ್ ವ್ಯಾಕ್ಸೀನ್ ನೀಡಬೇಕಾಗುತ್ತದೆ. ಬಳಿಕ 90 ದಿನ ಹಾಗೂ ನಂತರ ಪ್ರತಿ ವರ್ಷಕ್ಕೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದರ ಮೂಲಕ ನಾಯಿಗಳನ್ನು ರೋಗದಿಂದ ರಕ್ಷಿಸಬಹುದು ಪಶು ವೈದ್ಯ ಡಾ.ಧರ್ಮಪಾಲ ಹೇಳುತ್ತಾರೆ.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm