ಬ್ರೇಕಿಂಗ್ ನ್ಯೂಸ್
07-07-22 10:34 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಮನೆ ಮೇಲೆ ಗುಡ್ಡ ಕುಸಿದ ಪ್ರಕರಣದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೇರಿದೆ. ಬಂಟ್ವಾಳದ ವಗ್ಗ ಬಳಿಯ ಪಂಜಿಕಲ್ಲು ಎಂಬಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು.
ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆಂದು ಐವರು ಕಾರ್ಮಿಕರು ಬಂದಿದ್ದರು. ತೋಟದ ಪಕ್ಕದಲ್ಲೇ ಶೆಡ್ ರೀತಿ ಮನೆ ಮಾಡಿಕೊಂಡಿದ್ದು ಸಂಜೆ ಸುರಿದ ಮಳೆಗೆ ಇವರಿದ್ದ ಮನೆಯ ಮೇಲೆ ಮಣ್ಣು , ಕಲ್ಲು ಕುಸಿದು ಬಿದ್ದಿದೆ. ಈ ವೇಳೆ, ಅಖಿಲ್ ಎಂಬ ಒಬ್ಬಾತ ಮನೆಯ ಹೊರಗಿದ್ದರಿಂದ ಬಚಾವಾಗಿದ್ದಾನೆ.


ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ವೇಳೆ ಮನೆಯ ಒಳಗಿದ್ದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೃತರನ್ನು ಬಿಜು ಪಾಲಕ್ಕಾಡ್(45), ಸಂತೋಷ್ ಆಲಪ್ಪುಳ(46), ಬಾಬು ಕೊಟ್ಟಾಯಂ (46) ಎಂದು ಗುರುತಿಸಲಾಗಿದೆ.

ಬಿಜು ಮೃತದೇಹ ಮೊದಲು ಪತ್ತೆಯಾಗಿತ್ತು. ಆಬಳಿಕ ಬಾಬು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಂತೋಷ್ ಟಾಯ್ಲೆಟ್ ಒಳಗಡೆ ಪತ್ತೆಯಾಗಿದ್ದು ರಾತ್ರಿ 11 ಗಂಟೆ ವೇಳೆಗೆ ಹೊರಗೆಳೆದು ತರಲಾಗಿತ್ತು. ಉಸಿರು ಕಟ್ಟಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದರು. ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದ ಸಂತೋಷ್ ಮತ್ತು ಬಾಬು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಭಾರೀ ಮಳೆಗೆ ವಗ್ಗದಲ್ಲಿ ಗುಡ್ಡ ಕುಸಿತ ; ಶೆಡ್ ನೆಲಸಮ, ಓರ್ವ ಕಾರ್ಮಿಕ ಸಾವು
The rubber tapping labourers of Kerala origin got stuck under a pile of mud as a hill collapsed on the shed where they were residing on the night of Wednesday, July 6. While three died, one person is rescued and undergoing treatment at a hospital.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm