ಬ್ರೇಕಿಂಗ್ ನ್ಯೂಸ್
07-07-22 10:34 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಮನೆ ಮೇಲೆ ಗುಡ್ಡ ಕುಸಿದ ಪ್ರಕರಣದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೇರಿದೆ. ಬಂಟ್ವಾಳದ ವಗ್ಗ ಬಳಿಯ ಪಂಜಿಕಲ್ಲು ಎಂಬಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು.
ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆಂದು ಐವರು ಕಾರ್ಮಿಕರು ಬಂದಿದ್ದರು. ತೋಟದ ಪಕ್ಕದಲ್ಲೇ ಶೆಡ್ ರೀತಿ ಮನೆ ಮಾಡಿಕೊಂಡಿದ್ದು ಸಂಜೆ ಸುರಿದ ಮಳೆಗೆ ಇವರಿದ್ದ ಮನೆಯ ಮೇಲೆ ಮಣ್ಣು , ಕಲ್ಲು ಕುಸಿದು ಬಿದ್ದಿದೆ. ಈ ವೇಳೆ, ಅಖಿಲ್ ಎಂಬ ಒಬ್ಬಾತ ಮನೆಯ ಹೊರಗಿದ್ದರಿಂದ ಬಚಾವಾಗಿದ್ದಾನೆ.


ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ವೇಳೆ ಮನೆಯ ಒಳಗಿದ್ದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೃತರನ್ನು ಬಿಜು ಪಾಲಕ್ಕಾಡ್(45), ಸಂತೋಷ್ ಆಲಪ್ಪುಳ(46), ಬಾಬು ಕೊಟ್ಟಾಯಂ (46) ಎಂದು ಗುರುತಿಸಲಾಗಿದೆ.

ಬಿಜು ಮೃತದೇಹ ಮೊದಲು ಪತ್ತೆಯಾಗಿತ್ತು. ಆಬಳಿಕ ಬಾಬು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಂತೋಷ್ ಟಾಯ್ಲೆಟ್ ಒಳಗಡೆ ಪತ್ತೆಯಾಗಿದ್ದು ರಾತ್ರಿ 11 ಗಂಟೆ ವೇಳೆಗೆ ಹೊರಗೆಳೆದು ತರಲಾಗಿತ್ತು. ಉಸಿರು ಕಟ್ಟಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದರು. ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದ ಸಂತೋಷ್ ಮತ್ತು ಬಾಬು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಭಾರೀ ಮಳೆಗೆ ವಗ್ಗದಲ್ಲಿ ಗುಡ್ಡ ಕುಸಿತ ; ಶೆಡ್ ನೆಲಸಮ, ಓರ್ವ ಕಾರ್ಮಿಕ ಸಾವು
The rubber tapping labourers of Kerala origin got stuck under a pile of mud as a hill collapsed on the shed where they were residing on the night of Wednesday, July 6. While three died, one person is rescued and undergoing treatment at a hospital.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am