ಬ್ರೇಕಿಂಗ್ ನ್ಯೂಸ್
07-07-22 09:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 7 : ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು ಹೀಗಾಗಿ ಎರಡೂ ಜಿಲ್ಲೆಗಳಲ್ಲಿ ಜುಲೈ 8 ಮತ್ತು 9 ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 9ರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ಅಲ್ಲದೆ, 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಅವಧಿಯಲ್ಲಿ ಜನರು ಮುಂಜಾಗ್ರತೆ ವಹಿಸಬೇಕು ಎಂದೂ ಹವಾಮಾನ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.
ಇದೇ ಎಚ್ಚರಿಕೆಯನ್ನು ಪರಿಗಣಿಸಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತಗಳು ಶಾಲೆ, ಕಾಲೇಜಿಗೆ ರಜೆಯನ್ನೂ ಎರಡು ದಿನಕ್ಕೆ ಘೋಷಣೆ ಮಾಡಿವೆ. ಈಗಾಗಲೇ ಕಳೆದ ಮೂರು ದಿನಗಳಿಂದ ಮಳೆಯ ಕಾರಣಕ್ಕೆ ಎರಡೂ ಜಿಲ್ಲೆಗಳಲ್ಲಿ ರಜೆ ನೀಡಲಾಗಿತ್ತು. ಈಗ ಇನ್ನೂ ಎರಡು ದಿನಕ್ಕೆ ರಜೆಯನ್ನು ವಿಸ್ತರಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಳೆಯ ಕಾರಣ ಒಂದು ವಾರ ಕಾಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಿರುವ ದಾಖಲೆಯೂ ಸೇರಿದೆ.
ಈ ಹಿಂದೆಯೂ ಮಳೆಗಾಲದಲ್ಲಿ ಕೆಲವೊಮ್ಮೆ ವಿಪರೀತ ಮಳೆ ಬಿದ್ದ ದಿವಸ ರಜೆ ನೀಡಿದ್ದುಂಟು. ಆದರೆ ಒಂದೇ ಬಾರಿಗೆ ನಿರಂತರ ವಾರ ಪೂರ್ತಿ ರಜೆ ಸಾರಿದ್ದು ಕಡಿಮೆ. ಈ ಬಾರಿಯ ಮಳೆಗಾಲ ಇಪ್ಪತ್ತು ವರ್ಷಗಳ ಇತಿಹಾಸದಲ್ಲಿ ಅಪರೂಪದ ಎನ್ನುವಂತಹ ದಾಖಲೆ ಸೇರಿದೆ. ಆರ್ದ್ರಾ ನಕ್ಷತ್ರದಲ್ಲಿ ಕಳೆದ ಹತ್ತು ವರ್ಷದಲ್ಲಿ ಮಳೆ ಕಡಿಮೆಯಾಗಿರುತ್ತಿತ್ತು. ಈ ಬಾರಿಯೇ ಆರ್ದ್ರಾ ಮಳೆ ರೌದ್ರಾವತಾರ ತೋರಿದೆ.
As a red alert is issued by the India Meteorological Department for the Dakshina Kannada (DK) and Udupi districts on July 8 and 9, Dakshina Kannada (DK) deputy commissioner (DC) Dr K V Rajendra and Udupi DC Kurma Rao M declared a holiday on July 8 and 9 for all the educational institutions.It may be recalled, a holiday was declared on July 5, 6 and 7 also as heavy rains lashed the twin districts. All the anganwadis, private and government schools, colleges and degree colleges will remain close on July 8 and 9 in Dakshina Kannada and Udupi.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm