ಬ್ರೇಕಿಂಗ್ ನ್ಯೂಸ್
07-07-22 09:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 7 : ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು ಹೀಗಾಗಿ ಎರಡೂ ಜಿಲ್ಲೆಗಳಲ್ಲಿ ಜುಲೈ 8 ಮತ್ತು 9 ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 9ರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ಅಲ್ಲದೆ, 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಅವಧಿಯಲ್ಲಿ ಜನರು ಮುಂಜಾಗ್ರತೆ ವಹಿಸಬೇಕು ಎಂದೂ ಹವಾಮಾನ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.
ಇದೇ ಎಚ್ಚರಿಕೆಯನ್ನು ಪರಿಗಣಿಸಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತಗಳು ಶಾಲೆ, ಕಾಲೇಜಿಗೆ ರಜೆಯನ್ನೂ ಎರಡು ದಿನಕ್ಕೆ ಘೋಷಣೆ ಮಾಡಿವೆ. ಈಗಾಗಲೇ ಕಳೆದ ಮೂರು ದಿನಗಳಿಂದ ಮಳೆಯ ಕಾರಣಕ್ಕೆ ಎರಡೂ ಜಿಲ್ಲೆಗಳಲ್ಲಿ ರಜೆ ನೀಡಲಾಗಿತ್ತು. ಈಗ ಇನ್ನೂ ಎರಡು ದಿನಕ್ಕೆ ರಜೆಯನ್ನು ವಿಸ್ತರಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಳೆಯ ಕಾರಣ ಒಂದು ವಾರ ಕಾಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಿರುವ ದಾಖಲೆಯೂ ಸೇರಿದೆ.
ಈ ಹಿಂದೆಯೂ ಮಳೆಗಾಲದಲ್ಲಿ ಕೆಲವೊಮ್ಮೆ ವಿಪರೀತ ಮಳೆ ಬಿದ್ದ ದಿವಸ ರಜೆ ನೀಡಿದ್ದುಂಟು. ಆದರೆ ಒಂದೇ ಬಾರಿಗೆ ನಿರಂತರ ವಾರ ಪೂರ್ತಿ ರಜೆ ಸಾರಿದ್ದು ಕಡಿಮೆ. ಈ ಬಾರಿಯ ಮಳೆಗಾಲ ಇಪ್ಪತ್ತು ವರ್ಷಗಳ ಇತಿಹಾಸದಲ್ಲಿ ಅಪರೂಪದ ಎನ್ನುವಂತಹ ದಾಖಲೆ ಸೇರಿದೆ. ಆರ್ದ್ರಾ ನಕ್ಷತ್ರದಲ್ಲಿ ಕಳೆದ ಹತ್ತು ವರ್ಷದಲ್ಲಿ ಮಳೆ ಕಡಿಮೆಯಾಗಿರುತ್ತಿತ್ತು. ಈ ಬಾರಿಯೇ ಆರ್ದ್ರಾ ಮಳೆ ರೌದ್ರಾವತಾರ ತೋರಿದೆ.
As a red alert is issued by the India Meteorological Department for the Dakshina Kannada (DK) and Udupi districts on July 8 and 9, Dakshina Kannada (DK) deputy commissioner (DC) Dr K V Rajendra and Udupi DC Kurma Rao M declared a holiday on July 8 and 9 for all the educational institutions.It may be recalled, a holiday was declared on July 5, 6 and 7 also as heavy rains lashed the twin districts. All the anganwadis, private and government schools, colleges and degree colleges will remain close on July 8 and 9 in Dakshina Kannada and Udupi.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm