ಬ್ರೇಕಿಂಗ್ ನ್ಯೂಸ್
11-07-22 12:43 pm Mangalore Correspondent ಕರಾವಳಿ
ಉಳ್ಳಾಲ, ಜು.11: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹವಾಗಿತ್ತು. ದಂಪತಿಗೆ 8 ತಿಂಗಳ ಗಂಡು ಮಗು ಇದೆ. ವಿವಾಹ ಆದ ಆರಂಭದಲ್ಲೇ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿ ನಡುವಿನ ಕಲಹ ಶಮನಗೊಳಿಸುತ್ತಿದ್ದರು. ಭಾನುವಾರ ಸಂಜೆಯೂ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.


ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಂಶೀರಾ ಸಹೋದರಿಗೆ ಆಕೆಯ ಗಂಡನ ಮನೆಯವರಿಂದ ಫೋನ್ ಕರೆ ಬಂದಿದ್ದು ಜಂಶೀರಾ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಆದರೆ ಮನೆಮಗಳ ನಿಗೂಢ ಸಾವಿನ ಬಗ್ಗೆ ಜಂಶೀರಾ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ. ಮೃತ ಜಂಶೀರಳ ಮೃತದೇಹವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಹಿಂದಿನ ಅಸಲಿಯತ್ತು ಬೆಳಕಿಗೆ ಬರಲಿದೆ ಎನ್ನುವ ಮಾಹಿತಿಗಳಿವೆ. ಈ ನಡುವೆ, ಉಳ್ಳಾಲ ಪೊಲೀಸರು ಮೃತ ಜಂಶೀರಾಳ ಪತಿ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Mangalore 25 year old Woman found dead mysteriously in husbands house in Ullal, murder suspected. The deceased has been identified as Jamsira. Ullal police have taken husband into custody and are investigating.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm