ಬ್ರೇಕಿಂಗ್ ನ್ಯೂಸ್
02-10-20 09:56 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 02: ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗು ಇದಕ್ಕೆ ಅಲ್ಲಿನ ಸರಕಾರ ನಡೆದುಕೊಂಡ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಲಾಲ್ ಬಾಗ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗು ಉತ್ತರ ಪ್ರದೇಶ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಹಾಗೂ ಅಂತವರು ನೈಜ ಹಿಂದೂ ಆಗಿರಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಯೋಗಿ ಆದಿತ್ಯನಾಥ ಅವರ ಪ್ರತಿಕೃತಿ ದಹಿಸಿ ಸಿಟ್ಟು ಹೊರಹಾಕಿದ ಪ್ರತಿಭಟನಾಕಾರರು, ಯುವತಿಯ ಬೆನ್ನು ಮೂಳೆಯನ್ನು ಮುರಿದು, ನಾಲಗೆಯನ್ನು ಕತ್ತರಿಸಿ ಅತ್ಯಾಚಾರ ಮಾಡಿರುವುದು ಪೈಶಾಚಿಕ ಕೃತ್ಯವಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟ ಬಳಿಕ ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಪೊಲೀಸರು ಸುಟ್ಟು ಹಾಕಿರುವುದು ಉತ್ತರ ಪ್ರದೇಶದ ನಿಜ ಚಿತ್ರಣ ದೇಶದ ಮುಂದೆ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ಅತ್ಯಾಚಾರಿ ಕೊಲೆಗಡುಕರಿಗೆ ಅತೀ ಶೀಘ್ರವಾಗಿ ಮರಣ ದಂಡನೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಈ ಕೂಡಲೇ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am