ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.





ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm