ಬ್ರೇಕಿಂಗ್ ನ್ಯೂಸ್
02-10-20 12:56 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 2: ಕೊರೊನ ಮತ್ತು ಡ್ರಗ್ಸ್ ಒಂದೇ ನಾಣ್ಯದ ಎರಡು ಮುಖಗಳಂತೆ. ಆದರೆ, ನಮ್ಮ ಮಕ್ಕಳ ಮುಂದೆ ಕೊರೊನಾ, ಡ್ರಗ್ಸ್ ಗಿಂತಲೂ ಮೊಬೈಲ್ ಫೋನ್ ತುಂಬಾ ಮಾರಕವಾಗಿ ಪರಿಣಮಿಸಿದೆ ಎಂದು ಕಾಪಿಕಾಡು ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ ಅಧ್ಯಕ್ಷ ಮಾಜಿ ರಾಷ್ಟ್ರೀಯ ಕಬಡ್ಡಿ ಪಟು ಗೋಪಿನಾಥ್ ಕಾಪಿಕಾಡು ಹೇಳಿದರು.
ಇಲ್ಲಿನ ತೊಕ್ಕೊಟ್ಟು ಕಾಪಿಕಾಡು ಬಳಿಯ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕೊರೊನಾ ಮತ್ತು ಡ್ರಗ್ಸ್ ಮುಕ್ತ ಭಾರತಕ್ಕಾಗಿ ಉಮಾಮಹೇಶ್ವರಿ ಕ್ಷೇತ್ರದಿಂದ ಉಳ್ಳಾಲ ಅಬ್ಬಕ್ಕ ವೃತ್ತದವರೆಗೆ ನಡೆದ ಕಾಲ್ನಡಿಗೆ ಜಾಗೃತಿ ಜಾಥಾವನ್ನುದ್ದೇಶಿಸಿ ಅವರು ಮಾತನಾಡಿದರು. ಜಗತ್ತನ್ನು ಇವತ್ತು ಕೊರೊನ ಆವರಿಸಿ ಜನರನ್ನು ಭಯಭೀತಿಗೊಳಿಸಿದೆ. ಡ್ರಗ್ಸ್ ಭೂತವು ನಮ್ಮ ಯುವ ಸಮುದಾಯವನ್ನು ಹಾಳುಗೆಡವುತ್ತಿದೆ. ನಮ್ಮ ಎಳೆಯ ಮಕ್ಕಳ ಕೈಯಲ್ಲಿ ಇವತ್ತು ಆನ್ ಲೈನ್ ನೆಪದಲ್ಲಿ ಮೊಬೈಲ್ ಪೋನನ್ನು ಕೊಡುತ್ತಿದ್ದು, ಮಕ್ಕಳಿಗೆ ಇದು ಕೊರೊನ, ಡ್ರಗ್ಸ್ ಗಿಂತಲೂ ಮಾರಕವಾಗಿದೆ. ಮಕ್ಕಳನ್ನು ಇಡೀ ದಿವಸ ಮೊಬೈಲಲ್ಲಿ ಇರಲು ಬಿಡದೆ, ವ್ಯಾಯಾಮ, ಯೋಗಗಳಲ್ಲಿ ತೊಡಗಿಸಿದಲ್ಲಿ ಸಧೃಡ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು.

ಮಾಜಿ ಸಚಿವ ಯು.ಟಿ ಖಾದರ್ ಮಾತನಾಡಿ ಮಕ್ಕಳು ಶೈಕ್ಷಣಿಕ ಜೀವನದೊಟ್ಟಿಗೆ ಕ್ರೀಡೆ, ಯೋಗ, ವ್ಯಾಯಾಮಗಳಲ್ಲಿ ತೊಡಗಿಸಿದಲ್ಲಿ ಶರೀರದಲ್ಲಿ ರೋಗನಿರೋಧಕ ಶಕ್ತಿ ಇಮ್ಮಡಿಗೊಳ್ಳುವುದರ ಜೊತೆಗೆ ಡ್ರಗ್ಸ್ ನಂತಹ ದುಷ್ಚಟಗಳಿಂದಲೂ ದೂರ ಉಳಿಯಬಹುದೆಂದು ಹೇಳಿದರು. ಉಳ್ಳಾಲ ನಗರಸಭೆ ಕೌನ್ಸಿಲರ್ ಕು.ಭವಾನಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಉಮಾಮಹೇಶ್ವರಿ ಕಬಡ್ಡಿ ಅಸೋಸಿಯೇಶನ್ ಚೇರ್ಮನ್ ಎ.ಜೆ ಶೇಖರ್, ಗೌರವ ಸಲಹೆಗಾರರಾದ ಈಶ್ವರ ಉಳ್ಳಾಲ್, ಪ್ರ. ಕಾರ್ಯದರ್ಶಿ ಸುನೀಲ್ ರೈ , ಪದಾಧಿಕಾರಿಗಳಾದ ದಿನೇಶ್ ರೈ ಕಳ್ಳಿಗೆ, ಪ್ರಕಾಶ್, ಹರೀಶ್ ಗಾಂಧಿನಗರ, ದಿನಕರ್ ಬಗಂಬಿಲ, ರಘುರಾಮ್ ಶೆಟ್ಟಿ, ಗಣೇಶ್ ಕಾಪಿಕಾಡು, ಅರುಣ್ ಗಾಂಧಿನಗರ ಮೊದಲಾದವರು ಉಪಸ್ಥಿತರಿದ್ದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm