ಬ್ರೇಕಿಂಗ್ ನ್ಯೂಸ್
02-10-20 03:32 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಅರೇ, ಪಾಕಿಸ್ಥಾನದ ಗಡಿಭಾಗ ಕಾರ್ಗಿಲ್ ಈಗ ನಮ್ಮ ಬಂದರಿಗೂ ಬಂದಿವೆಯಾ..? ಅಲ್ಲಾ ಅಲ್ಲಿನ ಜನ ಬಂದಿದ್ದಾರೆಯೇ..? ಎರಡೂ ಅಲ್ಲ.. ಕರಾವಳಿಯ ಮೀನುಗಾರರಿಗೆ ಮಾತ್ರ ಈಗ ಈ ಕಾರ್ಗಿಲ್ ಹೆಸರು ಕೇಳಿದ್ರೆ ಭಯ ಹುಟ್ಟುವಂತೆ ಮಾಡಿದೆ. ಇದಕ್ಕೆ ಕಾರಣ ಕಾರ್ಗಿಲ್ ಅನ್ನೋ ಹೆಸರಿನ ಮೀನು ಕರಾವಳಿಗೆ ದಾಳಿ ಇಟ್ಟಿರುವುದು..
ಹೌದು.. ಕಳೆದ ವರ್ಷ ಭಾರಿ ಸುದ್ದಿ ಮಾಡಿದ್ದ ಈ ಕಾರ್ಗಿಲ್ ಮೀನು ಅಥವಾ ಟ್ರಿಗ್ಗರ್ ಫಿಶ್ ಈ ಬಾರಿ ಮತ್ತೆ ಮೀನುಗಾರರ ಬಲೆಗೆ ಬೀಳತೊಡಗಿದ್ದು ಚಿಂತೆಗೀಡುಮಾಡಿದೆ. ಈ ಮೀನುಗಳನ್ನು ಜನ ತಿನ್ನುವುದಕ್ಕೆ ಬಳಸುವುದಿಲ್ಲ. ಕೇವಲ ಗೊಬ್ಬರಕ್ಕೆ ಮಾತ್ರ ಇದನ್ನು ಬಳಸಲಾಗುತ್ತದೆ. ಈ ಬಾರಿ ಕೊರೊನಾ ಲಾಕ್ಡೌನ್, ಮೀನುಗಾರಿಕೆ ರಜೆ ಕಳೆದು ಸುದೀರ್ಘ 5 ತಿಂಗಳ ಬಳಿಕ ಮೀನುಗಾರಿಕೆ ಶುರುವಾಗಿತ್ತು. ಹೀಗಾಗಿ ಭರಪೂರ ಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿ ಮೀನುಗಾರರು ಇದ್ದರು. ಆದರೆ, ಆಳ ಸಮುದ್ರ ಮೀನು ಬೇಟೆಗೆ ತೆರಳಿದ್ದ ಮೀನುಗಾರರಿಗೆ ಈಗ ಆತಂಕ ಎದುರಾಗಿದೆ. ಇದಕ್ಕೆ ಕಾರಣ, ಕಾರ್ಗಿಲ್ ಮೀನುಗಳು. ಕಾರ್ಗಿಲ್ ಫಿಶ್ ಒಂದು ಕಡೆ ಎದುರಾಯ್ತು ಅಂದರೆ ಆ ಭಾಗದಲ್ಲಿ ಇತರೇ ಮೀನುಗಳೇ ಸುಳಿಯಲ್ಲ. ಉಳಿಯೋದೂ ಇಲ್ಲ. ಹೀಗಾಗಿ ರಾಶಿ ರಾಶಿ ರೂಪದಲ್ಲಿ ಎದುರಾಗುತ್ತಿರುವ ಈ ಕಾರ್ಗಿಲ್ ಮೀನುಗಳು ಮೀನುಗಾರಿಕೆಗೆ ಅಡ್ಡಿಯಾಗಿದೆ.

ಈ ಕಾರ್ಗಿಲ್ ಮೀನು ಹೆಚ್ಚಾಗಿ ಹವಳದ ದಿಬ್ಬಗಳು ಮತ್ತು ಲಕ್ಷದ್ವೀಪದಂಥ ಪ್ರದೇಶಗಳಲ್ಲಿ ಇರುತ್ತವೆ. ಅವು ಈಗ ಕರಾವಳಿಯತ್ತ ಬಂದಿದ್ದು ಜನ ಸಾಮಾನ್ಯವಾಗಿ ಬಳಸುವ ಬೂತಾಯಿ, ಬಂಗುಡೆ, ಅಂಜಲ್ ಮೀನುಗಳ ಲಭ್ಯತೆಗೆ ಅಡ್ಡಿಯಾಗುತ್ತಿದೆ. ಕಪ್ಪು ಬಣ್ಣದಿಂದ ಕೂಡಿರುವ ಈ ಮೀನುಗಳು, ಮನುಷ್ಯರಂತೆ ಹಲ್ಲುಗಳನ್ನು ಹೊಂದಿದ್ದು ವಾಸನೆಯುಕ್ತವಾಗಿವೆ. ಈ ಮೀನುಗಳನ್ನು ಕಂಡರೆ ಇತರೇ ಸಣ್ಣ ಮೀನುಗಳು ದೂರಕ್ಕೆ ಓಡುತ್ತವೆ. ಹೀಗಾಗಿ ಈ ಮೀನುಗಳು ಬಲೆಗೆ ಬಿದ್ದರೆ, ಬೇರೆ ಯಾವುದೇ ಮೀನು ಸಿಗಲ್ಲ. ಮೀನುಗಾರರು ಇವನ್ನು ಫಿಶ್ ಮೀಲ್ ಗಳಿಗೆ ಅತ್ಯಂತ ಕಡಿಮೆ ದರದಲ್ಲಿ ನೀಡಬೇಕಾಗುತ್ತದೆ.


ಮೀನಿಗೆ ಕಾರ್ಗಿಲ್ ಹೆಸರು ಬಂದಿದ್ದೇಗೆ..?
ರಾಜ್ಯದ ಕರಾವಳಿಯಲ್ಲಿ 1999 ರಲ್ಲಿ ಈ ಮೀನುಗಳು ಹೆಚ್ಚಾಗಿ ಕಾಣಿಸಿಕೊಂಡಿದ್ದವು. ಆಗ ಈ ಮೀನುಗಳ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಅದೇ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕಾರ್ಗಿಲ್ ಯುದ್ಧ ನಡೆಯುತ್ತಿತ್ತು. ಬಲೆಗೆ ಬಿದ್ದ ಮೀನುಗಳ ಮೈ ಬಣ್ಣವೂ ಸೈನಿಕರ ಸಮವಸ್ತ್ರದ ಹಾಗೆ ಕಪ್ಪಗೆ ಇತ್ತು. ಹಾಗಾಗಿ, ಮೀನುಗಾರರು ಕೂಡ ಇದನ್ನ ಕಾರ್ಗಿಲ್ ಮೀನು ಎಂದು ಕರೆದಿದ್ದಾರೆ ಎನ್ನಲಾಗ್ತಿದೆ. ಪ್ರತಿ ಬಾರಿಯೂ ಆಳಸಮುದ್ರದಲ್ಲಿ ಈ ಮೀನುಗಳು ಸಿಗುತ್ತವೆ. ಇವು ರಾಶಿ ರಾಶಿಯಾಗಿ ಬಲೆಗೆ ಬಿದ್ದುವಂದ್ರೆ ಮೀನುಗಾರರಿಗೆ ದೊಡ್ಡ ಹೊಡೆತ. ಈ ಬಾರಿ ಆಳ ಸಮುದ್ರಕ್ಕೆ ಹೋದ ಬೋಟ್ ಗಳಿಗೆ 60 ಶೇ.ಕ್ಕಿಂತ ಹೆಚ್ಚು ಇದೇ ಮೀನು ಸಿಕ್ಕಿದ್ದು ಇದರಿಂದ ದೊಡ್ಡ ನಷ್ಟವಾಗಿದೆ ಎನ್ನುತ್ತಿದ್ದಾರೆ. ದಿನಕ್ಕೆ ಏನಿಲ್ಲಾಂದ್ರೂ 60-70 ಟನ್ ಕಾರ್ಗಿಲ್ ಮೀನು ಮಂಗಳೂರು ಬಂದರಿಗೆ ಬರುತ್ತೆ ಅಂದ್ರೆ ಮಲ್ಪೆ, ಕಾರವಾರ ಕಡೆಗೆ ಎಷ್ಟಿರಾಕಿಲ್ಲ ಈ ಮೀನುಗಳ ರಾಡಿ.. ಕರಾವಳಿಯ ಉದ್ದಕ್ಕೂ ಈ ಮೀನುಗಳ ದಾಳಿಯಿಂದಾಗಿ ಇತರೇ ಮೀನು ಸಿಗೋದು ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಹಿಂದೆಲ್ಲಾ ಅಕ್ಟೋಬರ್, ನವಂಬರ್ ಬಂತೂಂದ್ರೆ ಬೂತಾಯಿ, ಬಂಗುಡೆ ರಾಶಿ ರಾಶಿ ಬರುತ್ತೆ.. ಈ ಬಾರಿ ಇನ್ನೂ ಆ ಪರಿ ಮೀನು ಬಂದಿಲ್ಲ ! ಬಂದರಿನಲ್ಲಿ ಬರೀಯ ಕಾರ್ಗಿಲ್ ಫಿಶ್ ಮಾತ್ರ ಕಾಣಿಸತ್ತೆ..!
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm