ಬ್ರೇಕಿಂಗ್ ನ್ಯೂಸ್
21-07-22 09:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋವು ಕಳ್ಳರ ಬಂಧನಕ್ಕೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಅದರಂತೆ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿರುವ ಶಾಸಕ ಕಾಮತ್, ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋವು ಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಪೊಲೀಸರನ್ನು ಕರೆದು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರದ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದು ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore Cow theft at Bajal, MLA Vedavyas kamath orders police to take strict action.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm