ಬ್ರೇಕಿಂಗ್ ನ್ಯೂಸ್
22-07-22 01:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಬಳಿಕ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ತೆರಳಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ ಜಾಥಾ ಹೋಗಲು ಪೊಲೀಸರ ಪೂರ್ವಾನುಮತಿ ಪಡೆಯದ ಕಾರಣ ನಿರಾಕರಣೆ ಮಾಡಲಾಗಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿದ್ದರಿಂದ ಬ್ಯಾರಿಕೇಡ್ ಹಾಕಿ, ಅಡ್ಡ ನಿಂತಿದ್ದರು. ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ಮೆರವಣಿಗೆ ಹೋಗಲು ಪೊಲೀಸರು ಅವಕಾಶ ನೀಡಲಿಲ್ಲ. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಬಿಜೆಪಿ ಸರಕಾರ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಇಡಿ, ಸಿಬಿಐ, ಐಟಿಯಂತಹ ಏಜನ್ಸಿಗಳನ್ನು ಬಳಸಿಕೊಳ್ಳುತ್ತಿವೆ. ಈ ರೀತಿಯ ಸೇಡಿನ ರಾಜಕಾರಣಕ್ಕೆ ಜನರು ಹೆಚ್ಚು ಕಾಲ ಅವಕಾಶ ಕೊಡುವುದಿಲ್ಲ. ಸದ್ಯದಲ್ಲೇ ಕೊನೆ ಬೀಳಲಿದೆ ಎಂದರು.



























ಬಳಿಕ ಪೊಲೀಸರ ಜೊತೆ ತಳ್ಳಾಟ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಬಳಿಕ ಪೊಲೀಸರು ಒಬ್ಬೊಬ್ಬರನ್ನೇ ವಶಕ್ಕೆ ಪಡೆದು ಬಸ್ಸಿಗೆ ಹತ್ತಿಸಿದರು. ಕೆಲಹೊತ್ತು ಜಟಾಪಟಿ ನಡೆದಿದ್ದು ಪೊಲೀಸರು ಬಳಿಕ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಕವಿತಾ ಸನಿಲ್, ಮಿಥುನ್ ರೈ, ಐವನ್ ಡಿಸೋಜ, ಮೊಯ್ದೀನ್ ಬಾವ ಪೊಲೀಸ್ ಬ್ಯಾರಿಕೇಡ್ ತಳ್ಳಿಕೊಂಡು ಕೆಲಕಾಲ ಹೈಡ್ರಾಮಾ ನಡೆಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಧು ಬಂಗಾರಪ್ಪ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ED quizzes Sonia Gandhi for 2 hours in National Herald case congress members protest in Mangalore fight with police. Amid protests by party workers in the capital and other parts of the country, ED officials questioned Congress chief Sonia Gandhi for two hours on Thursday in connection with a money laundering case, better known as the National Herald case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm