ಬ್ರೇಕಿಂಗ್ ನ್ಯೂಸ್
22-07-22 05:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿಯ ಕೊಳಂಬೆ ಎಂಬಲ್ಲಿ ಸನ್ಯಾಸತ್ವ ಸ್ವೀಕರಿಸಿ ತನ್ನದೇ ಆದ ಮಠ ಕಟ್ಟಿಕೊಂಡಿದ್ದ ಶ್ರೀಕೃಷ್ಣ ದೇವಿಪ್ರಸಾದ ಸ್ವಾಮೀಜಿ (50) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಐದು ವರ್ಷಗಳ ಹಿಂದೆ ಪತ್ನಿ ಮಕ್ಕಳನ್ನು ತ್ಯಜಿಸಿ ಧರ್ಮಚಾವಡಿ ಹೆಸರಲ್ಲಿ ಮಠ ಕಟ್ಟಿಕೊಂಡಿದ್ದರು. ಮಠದಲ್ಲಿಯೇ ನೆಲೆಸಿದ್ದ ಅವರು ಬರುತ್ತಿದ್ದ ಆಸುಪಾಸಿನ ಭಕ್ತರಿಗೆ ಜೀವನದ ದಾರಿಗಳನ್ನು ಹೇಳುತ್ತಾ ಸ್ಥಳೀಯವಾಗಿ ಸ್ವಾಮೀಜಿ ಎಂದು ಕರೆಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ದೇವರಿಗೆ ಪೂಜೆ ಸಲ್ಲಿಸಿ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂರ್ವಾಶ್ರಮದಲ್ಲಿ ಇವರ ಹೆಸರು ದೇವಿಪ್ರಸಾದ್ ಶೆಟ್ಟಿ ಎಂಬುದಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿ ಇದ್ದರು. ಸನ್ಯಾಸತ್ವ ಪಡೆದ ಬಳಿಕ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದರು. ಕುಟುಂಬದ ಸಂಪರ್ಕವನ್ನೂ ಕಡಿದುಕೊಂಡಿದ್ದರು. ಕಳೆದ ವರ್ಷ ತನ್ನ ಧರ್ಮ ಚಾವಡಿಯಲ್ಲಿ ಲಕ್ಷಾಂತರ ಖರ್ಚು ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಸ್ವಾಮೀಜಿ ದಿಢೀರ್ ಸಾವಿಗೆ ಶರಣಾಗಿದ್ದು ಅನುಮಾನ ಮೂಡಿಸಿದೆ. ಈ ಬಗ್ಗೆ ಪೂರ್ವಾಶ್ರಮದ ಪತ್ನಿ ಪ್ರಭಾ ಶೆಟ್ಟಿ ಬಜ್ಪೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅದರ ಬಳಿಯಲ್ಲೇ ಪ್ಲಾಸ್ಟಿಕ್ ಕುರ್ಚಿ ಕೂಡ ಇತ್ತು. ಮಠಕ್ಕೆ ಬಂದವರು ಸ್ವಾಮೀಜಿ ಸತ್ತಿರುವುದನ್ನು ನೋಡಿ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
The seer of Dharma Chavadi near Talakala Kandhavara panchayat limits Kolambe village killed himself on Friday, July 22 by hanging. The deceased has been identified as Sri Sri Sri Krishna Devi Prasad aged 51 years.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm