ಬ್ರೇಕಿಂಗ್ ನ್ಯೂಸ್
22-07-22 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಅರೆಬರೆ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಕಾಂಕ್ರೀಟ್ ರಸ್ತೆ ಅಗೆದು ಅಲ್ಲಲ್ಲಿ ಹೊಂಡ ಬಿದ್ದಿರುವುದು, ಕಾಂಕ್ರೀಟ್ ಒಡೆದು ಮಣ್ಣು ತುಂಬಿದ್ದರಿಂದ ವಾಹನ ಸಾಗಾಟಕ್ಕೆ ಸಮಸ್ಯೆ ಆಗಿರುವ ನಡುವಲ್ಲೇ ರಾವ್ ಎಂಡ್ ರಾವ್ ಸರ್ಕಲ್ ಬಳಿ ರಸ್ತೆ ಮಧ್ಯೆ ಹೊಂಡ ಬಿದ್ದಿರುವುದಕ್ಕೆ ಪೊಲೀಸ್ ಸಿಬಂದಿಯೊಬ್ಬರು ಕಲ್ಲು ತುಂಬಿ ಗಮನ ಸೆಳೆದಿದ್ದಾರೆ.
ಸ್ಟೇಟ್ ಬ್ಯಾಂಕ್ ವೃತ್ತದಿಂದ ರಾವ್ ಎಂಡ್ ರಾವ್ ಸರ್ಕಲ್ ಮೂಲಕ ಲೇಡಿಗೋಶನ್ ಕಡೆಗೆ ಸಾಗುವ ರಸ್ತೆಯಲ್ಲಿ ನಡುವೆ ಕಾಂಕ್ರೀಟ್ ರಸ್ತೆಯನ್ನು ಅಗೆದು, ಆನಂತರ ಮಣ್ಣು, ಜಲ್ಲಿ ತುಂಬಲಾಗಿತ್ತು. ಆದರೆ ವಾಹನಗಳು ಸಾಗಿದ ಬಳಿಕ ಮಣ್ಣು ಒಳಗೆ ಜಗ್ಗಿದ್ದರಿಂದ ಆ ಜಾಗ ಹೊಂಡ ಬಿದ್ದಿತ್ತು. ಇದರಿಂದ ಬೈಕ್ ಇನ್ನಿತರ ದ್ವಿಚಕ್ರ ವಾಹನಗಳು ಸಾಗುವುದಕ್ಕೆ ದೊಡ್ಡ ಅಡ್ಡಿಯಾಗಿತ್ತು. ಇದನ್ನು ಗಮನಿಸಿದ ಶುಕ್ರವಾರ ಟ್ರಾಫಿಕ್ ಕರ್ತವ್ಯಕ್ಕೆ ಸ್ಥಳದಲ್ಲಿ ನಿಯೋಜನೆ ಆಗಿದ್ದ ಪಾಂಡೇಶ್ವರ ಸಂಚಾರ ವಿಭಾಗದ ಶರಣಪ್ಪ ಎಂಬ ಪೊಲೀಸ್ ಸಿಬಂದಿ ಸ್ವತಃ ಕಲ್ಲುಗಳನ್ನು ತುಂಬಿ ಹೊಂಡ ಮುಚ್ಚಿದ್ದಾರೆ.



ರಸ್ತೆ ಬದಿ ಹಾಕಲಾಗಿದ್ದ ಇಂಟರ್ ಲಾಕ್ ಕಲ್ಲುಗಳನ್ನು ಹೊಂಡಕ್ಕೆ ಮುಚ್ಚಿ ಇನ್ನಷ್ಟು ದೊಡ್ಡ ಹೊಂಡ ಆಗದಂತೆ ಪ್ರಯತ್ನಿಸಿದ್ದಾರೆ. ಈ ರೀತಿ ಕೈಯಾರೆ ಕೆಲಸ ಮಾಡಿರುವುದನ್ನು ಅಲ್ಲಿನ ಸಾರ್ವಜನಿಕರು ಫೋಟೋ ತೆಗೆದು ಜಾಲತಾಣದಲ್ಲಿ ಹಂಚಿದ್ದು, ಭಾರೀ ವೈರಲ್ ಆಗಿದೆ. ಅಲ್ಲದೆ, ಉತ್ತರ ಕರ್ನಾಟಕ ಮೂಲದ ಪೊಲೀಸ್ ಸಿಬಂದಿಯ ಕಾರ್ಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ.
Mangalore Traffic cop fills potholes with interlock near State Bank appreciation pours on social media. Sharanappa, attached to the traffic east police station of Pandeshwar with the help of people around filled the gaping pothole with interlocks for the convenience of the public.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am