ಬ್ರೇಕಿಂಗ್ ನ್ಯೂಸ್
30-07-22 11:01 pm udupi Correspondent ಕರಾವಳಿ
ಉಡುಪಿ, ಜುಲೈ 30: ಮುಸ್ಲಿಂ ಸಮುದಾಯದ ಗೌರವಕ್ಕೆ ಧಕ್ಕೆ ತಂದಿರುವ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ಮುಸ್ಲಿಮರೇ ಬಹಿಷ್ಕರಿಸಬೇಕು. ಆಮೂಲಕ ಸಮಾಜದಲ್ಲಿ ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.
ಕರಾವಳಿಯಲ್ಲಿ ಕೋಮು ವೈಷಮ್ಯದ ವಾತಾವರಣ ನೆಲೆಸಿರುವುದರಿಂದ ಈ ಬಗ್ಗೆ ಹೇಳಿಕೆ ನೀಡಿರುವ ರಘುಪತಿ ಭಟ್, ಕರಾವಳಿ ಭಾಗದಲ್ಲಿ ಕೋಮು ಉದ್ರೇಕದ ಸ್ಥಿತಿ ನೆಲೆಯಾಗಲು ಈ ಸಂಘಟನೆಗಳೇ ಕಾರಣ. ಎಸ್ಡಿಪಿಐ ಮತ್ತು ಪಿಎಫ್ಐ ಕಾರಣದಿಂದಾಗಿ ಮುಸ್ಲಿಮರನ್ನು ಜನರು ಅನುಮಾನದಿಂದ ನೋಡುವಂತಾಗಿದೆ. ಹೀಗಾಗಿ ಆ ಸಂಘಟನೆಗಳನ್ನು ಸ್ವತಃ ಮುಸ್ಲಿಂ ಬಾಂಧವರೇ ಬಹಿಷ್ಕರಿಸಬೇಕು. ಇತ್ತೀಚೆಗೆ ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ದೂ ಇದೇ ಸಂಘಟನೆಗಳು. ಜಾತ್ಯತೀತ ಭಾವನೆಯುಳ್ಳ ಮತ್ತು ಶಾಂತಿ ಬಯಸುವ ಮುಸ್ಲಿಮರು ಈ ಸಂಘಟನೆಗಳನ್ನು ಹತ್ತಿರ ಬರದಂತೆ ದೂರ ಮಾಡಬೇಕು ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಕಾರ್ಯಕರ್ತರನ್ನು ಬಡಿದೆಬ್ಬಿಸಿದೆ. ಈಗಾಗಲೇ ರಾಜ್ಯ ಸರಕಾರ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದ್ದು, ಯಾರು ಇದರ ಹಿಂದಿದ್ದಾರೆ, ಯಾರು ಸಂಚು ಹೆಣೆದಿದ್ದಾರೆ ಅನ್ನುವುದನ್ನು ಪತ್ತೆ ಮಾಡಲಿದೆ. ಅಲ್ಲದೆ, ಮುಂದೆ ಸಂಚು ಹೆಣೆದಿರುವುದನ್ನೂ ಬಯಲು ಮಾಡಲಿದೆ ಎಂದು ಭಟ್ ಹೇಳಿದ್ದಾರೆ.
ಹಿಜಾಬ್ ವಿವಾದದ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ ಇತ್ತು. ಅದೇ ಕಾರಣದಿಂದಾಗಿ ಅಷ್ಟು ದೊಡ್ಡದಾಗಿ ವಿವಾದ ಸದ್ದು ಮಾಡಿತ್ತು. ಸಂಚು ದೊಡ್ಡದಿದ್ದರಿಂದ ಭಾರೀ ಪ್ರಚಾರ ಪಡೆದಿತ್ತು. ಆದರೆ ಅದರ ಕಾರಣಕ್ಕೆ ಸಾವು ಆಗುತ್ತದೆ ಅನ್ನುವುದನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಅಮಾಯಕ ಹರ್ಷನ ಕೊಲೆ ಆಗಿಹೋಗಿತ್ತು. ಈಗ ಮತ್ತೊಬ್ಬ ಕಾರ್ಯಕರ್ತನ ಹತ್ಯೆ ಆಗಿದೆ. ಕಾರ್ಯಕರ್ತರೇ ನಮ್ಮ ಪಕ್ಷದ ಜೀವಾಳ. ಒಂದು ಜೀವ ಹೋಗುವುದನ್ನು ನಾವು ಸರಳವಾಗಿ ನೋಡಿ ಕುಳಿತುಕೊಳ್ಳುವಂತಿಲ್ಲ. ಅಮೂಲ್ಯ ಜೀವ ತೆಗೆದ ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತಾಗಬೇಕು ಎಂದರು.
MLA Raghupati Bhat said SDPI and PFI organisations should be banned from Muslim society adding that the educated Muslims should become aware of the activities of the two organisations that are bringing disrepute to the entire minority communitHe was speaking to newspersons and answering queries pertaining to the serial killings that have rocked the coastal districts. He said the activities carried out by SDPI and PFI had created an impression and one of looking at minorities with suspicion.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm