ಬ್ರೇಕಿಂಗ್ ನ್ಯೂಸ್
03-10-20 12:27 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03: ತಮ್ಮ ಜೀವ ಪಣಕ್ಕಿಟ್ಟು ಸಮುದ್ರದಲ್ಲಿ ಮೀನು ಹಿಡಿಯುವುದನ್ನೇ ವೃತ್ತಿಯಾಗಿಸಿಕೊಂಡವರು ಬೆಸ್ತರು. ಮೊಗವೀರ ಸಮುದಾಯದ ಶ್ರಮ ಜೀವನಕ್ಕೆ ಯಾವುದೇ ರೀತಿಯಲ್ಲು ಬೆಲೆ ಕಟ್ಟಲಾಗದು. ಇದೇ ಆಶಯದ ಹಿನ್ನೆಲೆಯಲ್ಲಿ ಮೀನು ವ್ಯಾಪಾರದ ವೃತ್ತಿ ಮಾಡುವ ಮಹಿಳೆಯ ಚಿತ್ರವನ್ನು ಕಲಾವಿದರು ಉರ್ವ ಮೀನು ಮಾರ್ಕೆಟ್ ಗೋಡೆಯಲ್ಲಿ ಚಿತ್ರಿಸಿದ್ದು ಈಗ ಸಾರ್ವಜನಿಕರ ಆಕರ್ಷಣೆಗೆ ಕಾರಣವಾಗಿದೆ.
ಮಂಗಳೂರಿನ ಪಿಕ್ಸಿನ್ಸಿಲ್ ಎನ್ನುವ ಕಲಾವಿದರ ತಂಡ, ಮೊಗವೀರ ಸಮುದಾಯದ ಶ್ರಮ ಜೀವನವನ್ನು ನಾಗರಿಕ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಉರ್ವ ಮೀನು ಮಾರುಕಟ್ಟೆಯ ಗೋಡೆಯಲ್ಲಿ ಅಲ್ಲಿಯೇ ಮೀನು ಮಾರಾಟ ಮಾಡುವ ಮಹಿಳೆಯ ಚಿತ್ರವನ್ನು ರಚಿಸಿ ಗಮನ ಸೆಳೆದಿದ್ದಾರೆ.





ಉರ್ವದಲ್ಲಿ ಮೀನು ಮಾರಾಟ ಮಾಡುವ ಹಿರಿಯ ಮಹಿಳೆಯೊಬ್ಬರ ಚಿತ್ರ ಇದಾಗಿದ್ದು, ಮೊಬೈಲ್ನಲ್ಲಿ ಫೋಟೊ ತೆಗೆದು ಅದನ್ನು ನೋಡಿಯೇ ಗೋಡೆಯಲ್ಲಿ ಚಿತ್ರಿಸಲಾಗಿದೆ. ತನ್ನ ಚಿತ್ರವನ್ನು ನೋಡಿದ ಆ ಮಹಿಳೆ ಕೂಡ ಸಂಭ್ರಮಿಸಿದ್ದಾರೆ. ಚಿತ್ರದಲ್ಲಿ ಮೀನು ಕಾರ್ಮಿಕ ಮಹಿಳೆಯ ಬಗ್ಗೆ ಕಾಳಜಿ ಹಾಗೂ ಮೀನಿನ ಬಗ್ಗೆ ಜಾಗೃತಿಯನ್ನು ಬಣ್ಣಗಳಲ್ಲಿ ಚಿತ್ರಿಸಲಾಗಿದೆ.
ಇದೇ ರೀತಿ ಹಿರಿಯ ನಾಗರಿಕರೊಬ್ಬರ ಫೋಟೋ ತೆಗೆದು, ಅದನ್ನು ಉರ್ವಾ ಚಿಲಿಂಬಿಯಲ್ಲಿ ರಸ್ತೆ ಬದಿಯ ಗೋಡೆಯಲ್ಲಿ ಚಿತ್ರಿಸಲಾಗಿದೆ. ಇದರಲ್ಲಿ ಯುವ ಜನರನ್ನು ಉದ್ದೇಶಿಸಿ, ‘ಇಟ್ಸ್ ಯೂ ಟುಮಾರೊ’ ಎಂದು ಸಂದೇಶ ಬರೆಯಲಾಗಿದೆ. ಯಾರೂ ಹಿರಿಯರನ್ನು ಕಡೆಗಣಿಸದಿರಿ, ನಾಳೆ ನೀವೂ ಹಿರಿಯರ ಸ್ಥಾನಕ್ಕೆ ಹೋಗಲಿದ್ದೀರಿ ಎಂಬ ಚಿತ್ರಣವನ್ನು ಕೊಡಲಾಗಿದೆ. ಪೃಥ್ವಿರಾಜ್ ಮರೋಳಿ ನೇತೃತ್ವದ ಕಲಾವಿದರ ತಂಡದಲ್ಲಿ ಅಜೇಶ್ ಸಜಿಪ, ನಿತೇಶ್ ಕನ್ಯಾಡಿ, ವಿನೋದ್ ಚಿಲಿಂಬಿ ಹಾಗೂ ಅಭಿಜಿತ್ ದೇವಾಡಿಗ ಇದ್ದಾರೆ. ಈ ಚಿತ್ರಗಳನ್ನು ವೀಕ್ಷಿಸಿದ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.
ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಗಳನ್ನು ಅಲ್ಲಲ್ಲಿ ರಚಿಸುತ್ತಿದ್ದೇವೆ. ಉರ್ವದಲ್ಲಿ ಮೀನು ಮಾರುವ ಮಹಿಳೆಯ ಚಿತ್ರವನ್ನು ಮೂರು ದಿನದಲ್ಲಿ ಪೂರ್ಣಗೊಳಿಸಿದ್ದೇವೆ. ಒಂದೊಂದು ಕಡೆ ಹೊಸ ಪರಿಕಲ್ಪನೆಯೊಂದಿಗೆ ಚಿತ್ರ ಮಾಡುತ್ತಿದ್ದೇವೆ ಎಂದು ಕಲಾವಿದ ಪೃಥ್ವಿರಾಜ್ ತಿಳಿಸಿದ್ದಾರೆ.
Video:
For More Photos: Photo Gallery:
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm