ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.

ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am