ಬ್ರೇಕಿಂಗ್ ನ್ಯೂಸ್
02-08-22 10:03 pm udupi Correspondent ಕರಾವಳಿ
ಉಡುಪಿ, ಆಗಸ್ಟ್ 2 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರವೀಣ್ ಕೊಲೆಯಾದ ಬೆನ್ನಲ್ಲೇ ಪ್ರಕರಣದ ಬಗ್ಗೆ ಎನ್ಐಎ ತನಿಖೆ ನಡೆಸಿ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಕೂಡಲೇ ಅದಕ್ಕೆ ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ವಹಿಸಿಕೊಳ್ಳಲು ಸೂಚನೆ ನೀಡಿದ್ದರು.

ಮಂಗಳವಾರ ದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಷಾ ಅವರನ್ನು ಭೇಟಿಯಾದ ಶೋಭಾ, ಕೇರಳದ ಗಡಿ ಪ್ರದೇಶಗಳಲ್ಲಿ ನಡೆಯುತ್ತಿರುವ ವಿದ್ರೋಹಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಸಕ್ರಿಯವಾಗಿದ್ದು ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುತ್ತಿವೆ. ಮಂಗಳೂರು ಪ್ರದೇಶದ ಕಾರ್ಯಕರ್ತರು ಇಸ್ಲಾಮಿಕ್ ಸಂಘಟನೆಗಳಿಂದ ತೀವ್ರ ನಲುಗಿದ್ದಾರೆ ಎಂಬುದಾಗಿ ಅಮಿತ್ ಷಾಗೆ ವಿವರಿಸಿದ್ದಾರೆ.

ಅಲ್ಲದೆ, ಇಸ್ಲಾಮಿಕ್ ಭಯೋತ್ಪಾದನೆಯನ್ನು ತಡೆಗಟ್ಟಲು ಮತ್ತು ಇಸ್ಲಾಮಿಕ್ ಉಗ್ರರ ಕರಿನೆರಳು ಹೊಂದಿರುವ ಮಂಗಳೂರಿನ ಮೇಲೆ ನಿಗಾ ಇಡಲು ಎನ್ಐಎ ಕಚೇರಿಯನ್ನು ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಿಸುವಂತೆ ಅಮಿತ್ ಶಾಗೆ ಸಚಿವೆ ಶೋಭಾ ಮನವಿ ಮಾಡಿದ್ದಾರೆ.
Union minister of state Shobha Karandalaje met union home minister Amit Shah to thank him for handing over the investigation of Praveen Nettaru murder case to NIA. It may be recalled that Karandlaje had written to Shah seeking exemplary punishments to the perpetrators.Shobha Karandalaje, in her meeting with Amit Shah, apprised him of the radical activities taking place in the coastal regions of Karnataka bordering Kerala.
09-02-26 12:29 pm
HK News Desk
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm