ಬ್ರೇಕಿಂಗ್ ನ್ಯೂಸ್
03-08-22 08:13 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಮಂಗಳೂರಿನಲ್ಲಿ 16 ವರ್ಷಗಳಿಂದ ವಕೀಲರಾಗಿ ಗುರುತಿಸಿಕೊಂಡಿದ್ದ ಸಿರಾಜುದ್ದೀನ್ ಎ. ಅವರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ನಿವಾಸಿಯಾಗಿರುವ ಸಿರಾಜುದ್ದೀನ್, ಮಂಗಳೂರಿನಲ್ಲಿ ಖ್ಯಾತ ಕ್ರಿಮಿನಲ್ ವಕೀಲ ಅರುಣ್ ಬಂಗೇರ ಅವರ ಜೂನಿಯರ್ ಆಗಿ ವಕೀಲಿ ವೃತ್ತಿ ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಅವರು ನ್ಯಾಯಾಧೀಶರ ಹುದ್ದೆಗಾಗಿ ಪರೀಕ್ಷೆ ಬರೆಯುತ್ತಿದ್ದರು. ಏಳನೇ ಬಾರಿಯ ಪ್ರಯತ್ನದಲ್ಲಿ ಸಫಲತೆ ಕಂಡಿದ್ದಾರೆ. ಕಳೆದ ನವೆಂಬರ್ ನಲ್ಲಿ ಜಡ್ಜ್ ಹುದ್ದೆಗೆ ಅರ್ಜಿ ಕರೆಯಲಾಗಿತ್ತು. ಆನಂತರ ಫೆಬ್ರವರಿಯಲ್ಲಿ ಲಿಖಿತ ಪರೀಕ್ಷೆ, ಎಪ್ರಿಲ್, ಮೇ ತಿಂಗಳಲ್ಲಿ ವೈವಾ ಸಂದರ್ಶನ ಇತ್ಯಾದಿ ಹಂತಗಳಿದ್ದವು.
ಆಗಸ್ಟ್ 3 ರಂದು ಇಡೀ ರಾಜ್ಯದಲ್ಲಿ ಏಳು ಮಂದಿ ಜಿಲ್ಲಾ ನ್ಯಾಯಾಧೀಶ ಹುದ್ದೆಗೆ ಆಯ್ಕೆಯಾಗಿದ್ದಾರೆಂದು ಹೈಕೋರ್ಟ್ ಪ್ರಕಟಣೆ ಹೊರಡಿಸಿದೆ. ಏಳು ಮಂದಿಯಲ್ಲಿ ಗಂಗಾಧರ ಈರಪ್ಪ ಪಾಟೀಲ್, ಸುಮಂಗಲ ಚಕಲಬ್ಬಿ, ಮಧು ಎನ್.ಆರ್., ಆನಂದ, ಸಿರಾಜುದ್ದೀನ್, ಸರಿತಾ ಡಿ, ಮಾಯಣ್ಣ ಬಿಎಲ್ ಅವರ ಹೆಸರು ಇದೆ. 21 ಜಡ್ಜ್ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನಲ್ಲಿ ಅರ್ಜಿ ಕರೆಯಲಾಗಿತ್ತು. ಮಾರ್ಕ್ ಮತ್ತು ಮೆರಿಟ್ ಆಧಾರದಲ್ಲಿ ಏಳು ಮಂದಿಯನ್ನು ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಆಯ್ಕೆ ಮಾಡಿದ್ದಾಗಿ ನೋಟಿಫಿಕೇಶನ್ ಹೊರಡಿಸಿದೆ.
ಸಾಮಾನ್ಯ ಕೃಷಿ ಕುಟುಂಬದ ಸಿರಾಜುದ್ದೀನ್ ಉಪ್ಪಿನಂಗಡಿ ಬಳಿಯ ಇಳಂತಿಲ ನಿವಾಸಿಯಾಗಿದ್ದು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಕಾನೂನು ಪದವಿ ಪೂರೈಸಿದ್ದರು. ನಾಲ್ಕು ಸೋದರರು, ಇಬ್ಬರು ಸೋದರಿಯರ ಕುಟುಂಬದಲ್ಲಿ ಸಿರಾಜುದ್ದೀನ್ ಮೊದಲ ಬಾರಿಗೆ ಸರಕಾರಿ ಹುದ್ದೆ, ಅದರಲ್ಲೂ ಜಿಲ್ಲೆಯ ಅತ್ಯುನ್ನತ ಹುದ್ದೆಗೇರಿದ್ದಾರೆ. ಸಿರಾಜುದ್ದೀನ್ ಸದ್ಯ ಮಂಗಳೂರಿನಲ್ಲಿ ನೆಲೆಸಿದ್ದು, ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಒಬ್ಬರಷ್ಟೇ ಜಡ್ಜ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸದ್ಯಕ್ಕೆ ಆಯ್ಕೆ ಪ್ರಕಟಣೆಯಷ್ಟೇ ಆಗಿದ್ದು, ಯಾವ ಜಿಲ್ಲೆಗೆ ನೇಮಕಾತಿ ಆಗುತ್ತದೆ ಅನ್ನುವುದು ಇನ್ನಷ್ಟೇ ಆಗಬೇಕಿದೆ.
Sirajuddin Mangalore based lawyer appointed as District judge. Sirajuddin is to be practising from 16 years in Mangaluru court and hails from Belthangady.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm