ಬ್ರೇಕಿಂಗ್ ನ್ಯೂಸ್
03-08-22 08:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಕೋಮು ವೈಷಮ್ಯ, ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೊರ ರಾಜ್ಯದ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ ಪೊಲೀಸರನ್ನು ಕೆಎಸ್ ಆರ್ ಪಿ ಜೊತೆಗೆ ಹೆಚ್ಚುವರಿಯಾಗಿ ಭದ್ರತಗೆ ನಿಯೋಜಿಸಲಾಗಿದೆ. ಆದರೆ ಇವರು ಊಟದ ವಿಚಾರದಲ್ಲಿ ಸುರತ್ಕಲ್ ಪೊಲೀಸ್ ಸಿಬಂದಿ ಜೊತೆಗೆ ಆಕ್ಷೇಪ ತೆಗೆದು ಬೈದುಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಸುರತ್ಕಲ್ ಕ್ಯಾಂಪ್ ನಲ್ಲಿ ನಿಯೋಜನೆಗೊಂಡಿದ್ದ ಚಿಕ್ಕಮಗಳೂರು ಪೊಲೀಸರು ಊಟ ತಂದುಕೊಟ್ಟಿದ್ದ ಸುರತ್ಕಲ್ ಪೊಲೀಸ್ ಸಿಬಂದಿಗೆ ಬೈದಿದ್ದು ಊಟ ಚೆನ್ನಾಗಿಲ್ಲ, ಹಳಸಿದೆ ಎಂದು ಹೇಳಿ ನಿಂದಿಸಿದ್ದಾರೆ. ಊಟದ ವಿಚಾರದಲ್ಲಿ ಆರಂಭಗೊಂಡ ಮಾತು ಆಬಳಿಕ ಬೇರೆ ವಿಚಾರಕ್ಕೆ ತಿರುಗಿದ್ದು, ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಇದರ ವಿಡಿಯೋವನ್ನು ಒಬ್ಬರು ಸಿಬಂದಿಯೇ ಮಾಡಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಸುರತ್ಕಲ್ ಇನ್ಸ್ ಪೆಕ್ಟರ್ ಚಂದ್ರಪ್ಪ ಬಳಿ ಕೇಳಿದಾಗ, ಊಟ ಚೆನ್ನಾಗಿತ್ತು. ಎಲ್ಲರಿಗೂ ಒಂದೇ ಕಡೆಯಿಂದ ಊಟ ಪೂರೈಕೆ ಮಾಡಲಾಗಿತ್ತು. ಎಲ್ಲ ಅಧಿಕಾರಿಗಳು, ಕೆಎಸ್ ಆರ್ ಪಿ ಸಿಬಂದಿ ಅದನ್ನೇ ಊಟ ಮಾಡಿದ್ದಾರೆ. ಊಟದ ಬಗ್ಗೆ ಕಂಪ್ಲೇಂಟ್ ಇರಲಿಲ್ಲ. ಚಿಕ್ಕಮಗಳೂರು ಪೊಲೀಸರು ಮಾತ್ರ ಆಕ್ಷೇಪ ತೆಗೆದಿದ್ದಾರೆ ಎಂದು ಹೇಳಿದರು. ಮಾಹಿತಿ ಪ್ರಕಾರ, ಊಟ ಚೆನ್ನಾಗಿಲ್ಲ, ಹಳಸಿದೆ ಎಂದು ಯಾರೋ ಕೇಳಿದ್ದಕ್ಕೆ, ನಾವು ದತ್ತಪೀಠಕ್ಕೆ ಬಂದಾಗ ಇದಕ್ಕಿಂತ ಒಳ್ಳೆ ಊಟ ಕೊಡುತ್ತೀರಾ ಎಂದು ಇಲ್ಲಿನ ಸಿಬಂದಿ ತಿರುಗೇಟು ನೀಡಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಹಲವರು ಸೇರಿ ಬೈದಾಡಿಕೊಂಡಿದ್ದಾರೆ.


ಪ್ರತಿ ಬಾರಿ ಕೋಮು ಗಲಭೆಯ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹೊರ ಜಿಲ್ಲೆಗಳ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸರಿಯಾದ ಸಂದರ್ಭದಲ್ಲಿ ಊಟ, ನೀರು ಸಿಗದ್ದಕ್ಕೆ ಕೆಲವೊಮ್ಮೆ ಪೊಲೀಸ್ ಸಿಬಂದಿ ಆಕ್ಷೇಪ ತೆಗೆಯುತ್ತಾರೆ. ಆದರೆ, ಇಲ್ಲಿ ಊಟದ ಜೊತೆಗೆ ಹಳೆ ವಿಚಾರವನ್ನು ಕೆದಕಿ ಬೈದುಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
Mangalore police constable and chikkamagalur police constables fighting over food alleging that spoilt food has been distributed goes viral on social media.
09-02-26 12:29 pm
HK News Desk
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm