ಬ್ರೇಕಿಂಗ್ ನ್ಯೂಸ್
05-08-22 01:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 5 : ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತಾಲೂಕಿನಲ್ಲಿ ನಾಲ್ಕು ಗ್ರಾಮಗಳ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಜಲಸ್ಫೋಟ ಉಂಟಾಗಿದ್ದು, ಮನೆ, ಕೃಷಿ ಜಮೀನುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.


ಸುಳ್ಯ ಹಾಗೂ ಕಡಬ ತಾಲೂಕಿನ ಕಾಳಜಿ ಕೇಂದ್ರಗಳಲ್ಲಿ ಒಟ್ಟು 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸಕಾ೯ರಿ ಪ್ರಾಥಮಿಕ ಶಾಲೆಯಲ್ಲಿ 21 ಮಂದಿ, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 12 ಮಂದಿ, ಸುಬ್ರಹ್ಮಣ್ಯದ ಅನಘಾ ವಸತಿಗೃಹದಲ್ಲಿ 13 ಮಂದಿ, ಯೇನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿ ಇದ್ದಾರೆ ಎಂದು ತಾಲ್ಲೂಕು ಆಡಳಿತ ಮಾಹಿತಿ ನೀಡಿದೆ.


ನಿರಂತರ ಮಳೆಯಿಂದಾಗಿ ಮಡಪ್ಪಾಡಿಯಲ್ಲಿ ಅಪಾರ ಹಾನಿ ಸಂಭವಿಸಿದೆ. ಮಡಪ್ಪಾಡಿಯ ಗೋಳಿಯಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದು ಬ್ಲಾಕ್ ಆಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಡಪ್ಪಾಡಿಯಿಂದ ಶೀರಡ್ಕ, ದೇರಮಜಲು ಸಂಪರ್ಕಿಸುವ ರಸ್ತೆಯಲ್ಲಿ ಅಂಬೆಕಲ್ಲು ಎಂಬಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ. ಹಾಡಿಕಲ್ಲು ಎಂಬಲ್ಲಿ ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿದ್ದು, ಅಲ್ಲಿಯೇ ಮನೆಯೊಂದು ಕುಸಿವ ಭೀತಿಯಲ್ಲಿದೆ. ಪೂಂಬಾಡಿಯನ್ನು ಸಂಪರ್ಕಿಸುವ ಶೆಟ್ಟಿಮಜಲು ಸೇತುವೆ ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿದೆ. ಜಾಲುಮನೆ ಎಂಬಲ್ಲಿಯೂ ಸೇತುವೆಯ ಮಣ್ಣು ಕೊಚ್ಚಿ ಹೋಗಿದೆ.
Heavy rains in Sullia, 58 people transferred to a safer place. Wednesday extended holiday to some education institutes in Sullia taluk on Thursday, in view of continuing torrential rain in the taluk.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm