ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm