ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm