ಬ್ರೇಕಿಂಗ್ ನ್ಯೂಸ್
04-10-20 11:26 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 4: ಗೋವುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ತುಂಬಿಸಿಕೊಂಡು ಸಾಗಿಸುತ್ತಿದ್ದ ವೇಳೆ ಗೋವುಗಳು ಒಂದೊಂದೇ ರಸ್ತೆಗೆ ಎಸೆಯಲ್ಪಟ್ಟು ಅವಾಂತರ ಸೃಷ್ಟಿಯಾದ ಘಟನೆ ನಗರದಲ್ಲಿ ನಡೆದಿದೆ.
ಸುರತ್ಕಲ್ ಕಡೆಯಿಂದ ನಸುಕಿನ ವೇಳೆ ಅಕ್ರಮವಾಗಿ ಗೋವುಗಳನ್ನು ಕುದ್ರೋಳಿ ಕಸಾಯಿಖಾನೆಯತ್ತ ತರಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಕೊಟ್ಟಾರ ಬಳಿ ತಡೆಯಲು ಯತ್ನಿಸಿದ್ದಾರೆ. ಆದರೆ, ಕಾರ್ಯಕರ್ತರನ್ನು ಲೆಕ್ಕಿಸದೆ ಟೆಂಪೋ ವೇಗವಾಗಿ ಧಾವಿಸಿದ್ದು ಈ ವೇಳೆ ಅಪಾಯಕಾರಿಯಾಗಿ ತುಂಬಿಸಿದ್ದ ಗೋವುಗಳು ಹಿಂಭಾಗದ ಬಾಗಿಲು ಓಪನ್ ಆಗಿ ರಸ್ತೆಗೆ ಎಸೆಯಲ್ಪಟ್ಟಿದೆ. ಕೊಟ್ಟಾರ, ಕುಂಟಿಕಾನ ಜಂಕ್ಷನ್, ಮಣ್ಣಗುಡ್ಡೆ ಬಳಿ ಒಂಬತ್ತು ಗೋವುಗಳು ಹೀಗೆ ರಸ್ತೆಗೆ ಬಿದ್ದು ನರಳಾಡಿವೆ. ಇಷ್ಟಾದರೂ, ಆರೋಪಿಗಳು ಟೆಂಪೋವನ್ನು ನಿಲ್ಲಿಸದೆ ಪರಾರಿಯಾಗಿದ್ದಾರೆ.
ಕೊನೆಗೆ, ಬಜರಂಗದಳ ಕಾರ್ಯಕರ್ತರು ಮಣ್ಣಗುಡ್ಡೆ ಬಳಿ ರಸ್ತೆಗೆ ಬಿದ್ದ ಗೋವುಗಳನ್ನು ರಸ್ತೆಯಲ್ಲೇ ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಕಾರ್ಯಕರ್ತರು ಬೆಳ್ಳಂಬೆಳಗ್ಗೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ಸ್ಥಳಕ್ಕಾಗಮಿಸಿದ ಬರ್ಕೆ ಠಾಣೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.



ಟೆಂಪೋವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಬೇಕು, ಅದರಲ್ಲಿದ್ದ 30ಕ್ಕೂ ಹೆಚ್ಚು ಗೋವುಗಳನ್ನು ವಶಕ್ಕೆ ಪಡೆಯಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬಳಿಕ ಪೊಲೀಸರು ಟೆಂಪೋ ಮತ್ತು ಅದರಲ್ಲಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅಲ್ಲಲ್ಲಿ ರಸ್ತೆಗೆ ಬಿದ್ದ ಒಂಬತ್ತು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ.
ಹೀಗೆ ನೆಲಕ್ಕೆ ಬಿದ್ದ ಗೋವುಗಳಲ್ಲಿ ಹೆಚ್ಚಿನವು ಸಣ್ಣ ಪ್ರಾಯದ ಕರುಗಳು. ಕರುಗಳನ್ನು ಮಾಂಸ ಮಾಡಿ, ಮಟನ್ ಜೊತೆಗೆ ಬೆರೆಸುತ್ತಾರೆಂಬ ದೂರುಗಳಿವೆ. ಇದೇ ಕಾರಣಕ್ಕೆ ಗಂಡು ಕರುಗಳಿಗೆ ಭಾರೀ ಬೇಡಿಕೆ ಇದೆ. ನಿಯಮಿತವಾಗಿ ಮಟನ್ ಪೂರೈಕೆ ಆಗುವಲ್ಲಿ ಕರುಗಳ ಮಾಂಸವನ್ನು ಮಿಕ್ಸ್ ಮಾಡಲಾಗುತ್ತಿದೆ ಎನ್ನುವ ವಿಚಾರವನ್ನು ಅಲ್ಲಿನ ವ್ಯಾಪಾರಿಗಳೇ ಹೇಳುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಆಹಾರ ಇಲಾಖೆ ಅಧಿಕಾರಿಗಳು ತಪಾಸಣೆಗೆ ಬರದೇ ಇರುವುದು ದಂಧೆಕೋರರಿಗೆ ಭಯ ಇಲ್ಲದಾಗಿದೆ. ದಿನವೂ ನಸುಕಿನ ವೇಳೆ ಅಕ್ರಮ ಗೋಸಾಗಾಟ ನಡೆಯುತ್ತಿದ್ದರೂ, ಕಡಿವಾಣ ಇಲ್ಲದಾಗಿದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm