ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.


ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am