ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.


ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm