ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.


ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm