ಬ್ರೇಕಿಂಗ್ ನ್ಯೂಸ್
09-08-22 10:27 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9 : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ, ಆಂತರಿಕ ಕಚ್ಚಾಟವನ್ನು ಮುಚ್ಚಿಡಲು ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡಿದೆ ಎಂದು ಹೇಳಿದ್ದಾರೆ.

ಗೊಂದಲ ಸೃಷ್ಟಿಸುವ ಕಾಂಗ್ರೆಸ್ ಆಟ ನಡೆಯುವುದಿಲ್ಲ. ಮೊದಲು ಅವರಲ್ಲಿರುವ ಗೊಂದಲವನ್ನು ಸರಿ ಮಾಡಿಕೊಳ್ಳಲಿ, ಕಾಂಗ್ರೆಸ್ ಭವಿಷ್ಯ ಏನೆಂಬುದು ಮುಂದಿನ ಚುನಾವಣೆಯಲ್ಲಿ ಗೊತ್ತಾಗಲಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಹಗರಣಗಳು ಬಯಲಿಗೆ ಬಂದಿದೆ. ಸೋನಿಯಾ, ರಾಹುಲ್ ಗಾಂಧೀಜಿ ಇಡಿ ತನಿಖೆ, ಡಿಕೆಶಿಯವರಿಗೆ ಜಾಮೀನು, ಮುಖ್ಯಮಂತ್ರಿ ಗೊಂದಲ, ದಲಿತ ಮುಖ್ಯಮಂತ್ರಿ ಚರ್ಚೆ ಇವೆಲ್ಲ ಗೊಂದಲಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಇಂತಹ ಟ್ವೀಟ್ ಮಾಡುತ್ತಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.
CM Bommai to continue as CM no changes says state President Nalin Kumar Kateel in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm