ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am