ಬ್ರೇಕಿಂಗ್ ನ್ಯೂಸ್
16-08-22 09:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ದೆಹಲಿ ಕೇಂದ್ರ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ವಾರದ ಹಿಂದೆ ಮೊದಲ ನಾಲ್ವರು ಆರೋಪಿಗಳನ್ನು ಬಂಧಿಸಿದ ಬೆನ್ನಲ್ಲೇ ದೆಹಲಿಯ ಎನ್ಐಎ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಜಾಕೀರ್, ಮಹಮ್ಮದ್ ಶಫೀಕ್, ಶೇಕ್ ಸದ್ದಾಂ ಮತ್ತು ಅಬ್ದುಲ್ ಹ್ಯಾರಿಸ್ ಹೆಸರನ್ನು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಅದರ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಪುತ್ತೂರು, ಸುಳ್ಯದಲ್ಲಿ ತನಿಖೆಯನ್ನೂ ಕೈಗೊಂಡಿದ್ದರು. ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆ 16 ಮತ್ತು 18ರಡಿ ಕೇಸು ದಾಖಲಾಗಿದೆ.
ಎಫ್ಐಆರ್ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದು ದೆಹಲಿಗೆ ಒಯ್ಯುವ ಸಾಧ್ಯತೆಯಿದೆ. ಸ್ಥಳೀಯರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಲಾಗಿದೆ ಎನ್ನುವ ಅಂಶವನ್ನು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಹೀಗಾಗಿ ಕೊಲೆ ಕೃತ್ಯವನ್ನು ಭಯೋತ್ಪಾದಕ ಕೃತ್ಯದಂತೆ ಬಿಂಬಿಸುವ ಸಾಧ್ಯತೆಯಿದೆ. ಈಗಾಗಲೇ ಹತ್ತು ಮಂದಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ಕೊನೆಯ ಮೂವರು ಹತ್ಯೆ ಸಂಚು ಮತ್ತು ಕೃತ್ಯದಲ್ಲಿ ನೇರ ಶಾಮೀಲಾದವರು. ಶಿಹಾಬುದ್ದೀನ್(33), ರಿಯಾಜ್(27) ಮತ್ತು ಬಶೀರ್ ಎಲಿಮಲೆ ಪ್ರಮುಖರಾಗಿದ್ದು, ಅವರನ್ನೇ ಗುರಿಯಾಗಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.
ಕಳೆದ ಐದು ದಿನಗಳ ಕಾಲ ಮೂವರನ್ನು ಕಸ್ಟಡಿಗೆ ಪಡೆದು ಪೊಲೀಸರು ತನಿಖೆ ನಡೆಸಿದ್ದಾರೆ. ಆಗಸ್ಟ್ 16ಕ್ಕೆ ಕಸ್ಟಡಿ ಅವಧಿ ಮುಗಿದಿದ್ದರಿಂದ ಮಂಗಳವಾರ ಸುಳ್ಯ ಕೋರ್ಟಿಗೆ ಹಾಜರುಪಡಿಸಿದ್ದು ಮೂವರನ್ನು ಆಗಸ್ಟ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ನಡುವೆ, ಎನ್ಐಎ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದ್ದು, ಆರೋಪಿಗಳನ್ನು ದೆಹಲಿಗೆ ಒಯ್ಯುತ್ತಾರೆಯೇ ಇಲ್ಲೇ ತನಿಖೆ ನಡೆಸುತ್ತಾರೆಯೇ ಎನ್ನುವ ಕುತೂಹಲ ಇದೆ. ದೆಹಲಿಯಲ್ಲಿ ಎಫ್ಐಆರ್ ಆಗಿರುವುದರಿಂದ ಆರೋಪಿಗಳಿಗೆ ಕಠಿಣ ಶಿಕ್ಷೆ ಜಾರಿಗೊಳಿಸುವ ಸಾಧ್ಯತೆಯೇ ಹೆಚ್ಚು. ಯಾವುದೇ ಪ್ರಕರಣ ಎನ್ಐಎ ತನಿಖೆಗೆ ಒಪ್ಪಿಸಿದಲ್ಲಿ ಕರಾರುವಾಕ್ ತಾಂತ್ರಿಕ ಸಾಕ್ಷ್ಯಗಳ ಕಾರಣ 99 ಶೇಕಡಾ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವುದು ಎನ್ಐಎ ತನಿಖೆ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.
NIA registers FIR against Praveen Bellare murder accused, soon to take them to custody says sources. The main three accused in this case are identified as Shiyabuddin(33), a cocoa supplier from Sullia taluk, Riyaz (27), a chicken supplier from Ankathadka and Basheer (29), a hotel worker from Elimale near Subrahmanya. All three are locals and had allegedly committed the murder before fleeing to Kerala. They had used two bikes and four cars to commit the crime.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm