ಬ್ರೇಕಿಂಗ್ ನ್ಯೂಸ್
05-10-20 12:38 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05 : ಈ ಬಾರಿ ಕೃಷ್ಣಾಷ್ಟಮಿ, ಗಣೇಶೋತ್ಸವಕ್ಕೆ ಕೊರೊನಾ ನಿರ್ಬಂಧ ನೆಪದಲ್ಲಿ ಆಚರಣೆಗೆ ಅವಕಾಶ ನೀಡಿರದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಸರಾ ಉತ್ಸವಕ್ಕೆ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ದೇವಸ್ಥಾನಗಳಲ್ಲಿ ಆಚರಿಸಲು ಅವಕಾಶ ನೀಡಿದೆ.
ದೇವಸ್ಥಾನಗಳಲ್ಲಿ ದಸರಾ ಹಬ್ಬದ ನಿಮಿತ್ತ ಶಾರದಾ ವಿಗ್ರಹ ಸ್ಥಾಪನೆ ಮಾಡಿದರೂ ಹೆಚ್ಚಿನ ಜನ ಸೇರಲು ಅವಕಾಶ ಇಲ್ಲ. ಯಾವುದೇ ತರಹದ ಸಭೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರಲ್ಲ. ಅಲ್ಲದೆ, ಹುಲಿವೇಷ ತಂಡಕ್ಕೂ ಅವಕಾಶ ನೀಡದಿರಲು ಜಿಲ್ಲಾ ಧಾರ್ಮಿಕ ಪರಿಷತ್ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ದಸರಾ ಹಬ್ಬ ನೆಪದಲ್ಲಿ ಜನಸಂದಣಿ ಸೇರುವಂತಿಲ್ಲ. ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕಾೃನಿಂಗ್, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ನಿಯಮಗಳನ್ನು ಜಾರಿಗೆ ತರಲು ಸ್ವಯಂಸೇವಕರನ್ನು ಬಳಸಿಕೊಳ್ಳಬೇಕು. ದೇವಸ್ಥಾನದ ಒಳಗೆ ಸಾಮಾಜಿಕ ಅಂತರ ಕಾಪಾಡಲು ಕುರ್ಚಿಗಳನ್ನು ಇರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮ ನೇರಪ್ರಸಾರ ಮಾಡಿ, ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ದೊಡ್ಡ ಗಾತ್ರದ ಶಾಮಿಯಾನ, ಚಪ್ಪರ ಹಾಕಲು ಅವಕಾಶ ನೀಡದಂತೆ ಎಲ್ಲಾ ದೇವಸ್ಥಾನಗಳಿಗೆ ಸೂಚಿಸುವ ನಿಟ್ಟಿನಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಇಷ್ಟೇ ಅಲ್ಲದೆ ಹಬ್ಬದಲ್ಲಿ ಅಂಗಡಿ ವ್ಯಾಪಾರಕ್ಕೆ ಕೂಡ ಅವಕಾಶ ನೀಡಲಾಗಿಲ್ಲ.

ಇದೇ ವೇಳೆ ಮುಂಬರುವ ದೀಪಾವಳಿ ಹಬ್ಬವನ್ನೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೀಪಾವಳಿಗೆ ಸುಡುಮದ್ದು/ಪಟಾಕಿ ಶೇಖರಣೆ, ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕೆ.ಸೂರ್ಯ ಕಶೆಕೋಡಿ, ಸೂರ್ಯನಾರಾಯಣ ಭಟ್, ಹಾಗೂ ವಿವಿಧ ದೇವಸ್ಥಾನಗಳ ಆಡಳಿತ ಮುಖ್ಯಸ್ಥರು ಉಪಸ್ಥಿತರಿದ್ದರು.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm