ಬ್ರೇಕಿಂಗ್ ನ್ಯೂಸ್
05-10-20 02:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05: ಪ್ರಸಿದ್ಧ ಮಂಗಳೂರು ದಸರಾ ಉತ್ಸವವನ್ನು ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ನಡೆಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ನಿರ್ಧರಿಸಿದೆ.
ದಸರಾ ಉತ್ಸವ ಆಚರಣೆ ಕುರಿತು ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಆಹ್ವಾನಿತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಮಂಗಳೂರು ದಸರಾವನ್ನು ಕೊರೊನಾದಿಂದಾಗಿ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ‘ನಮ್ಮ ದಸರಾ - ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯ ಮುಂದಿಟ್ಟು ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಎಲ್ಲ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ಗೆ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಪ್ರತಿನಿತ್ಯ 150ರಿಂದ 200 ಜನರ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.
ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾತನಾಡಿ, ಪೂಜೆ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷತೆ ಸೇರಿ ಪ್ರತಿ ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಂತೆ ದಸರಾ ಮಹೋತ್ಸವ ನಡೆಯಲಿದೆ. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಜೊತೆಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ಉತ್ಸವ ನಡೆಸಲಾಗುವುದು. ಆದರೆ ಈ ಬಾರಿ ದಸರಾ ಮೆರವಣಿಗೆ ಇರುವುದಿಲ್ಲ ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರ್ ಮಾತನಾಡಿ, ಕರೊನಾ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆ ನಡೆಸುವುದು ಅನಿವಾರ್ಯ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.
ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕರ್ಕೇರ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm