ಬ್ರೇಕಿಂಗ್ ನ್ಯೂಸ್
19-08-22 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19 : ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. 1924ರ ನಂತರ ಸಾವರ್ಕರ್ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆ ಇದೆಯಾ ? ಆಬಳಿಕ ಸಾವರ್ಕರ್ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. ಈ ಬಗ್ಗೆ ಮಾತ್ರ ಕಾಂಗ್ರೆಸ್ ಪ್ರಶ್ನೆ ಇರುವುದು. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದರು.

ಹಾಗೆಂದು, ಸಿದ್ದರಾಮಯ್ಯ ಯಾರಿಗೂ ಆಕ್ರೋಶ ಬರುವಂತೆ ಹೇಳಿಕೆಯನ್ನು ಕೊಟ್ಟಿಲ್ಲ. ಬ್ಯಾನರ್ ಹಾಕಿದ್ದಕ್ಕೆ ಆಕ್ಷೇಪ ಮಾಡಿಲ್ಲ. ಆದರೆ ಬ್ಯಾನರ್ ಹಾಕಿದ್ದವರ ಉದ್ದೇಶದ ಬಗ್ಗೆ ಮಾತಾಡಿದ್ದರು. ಯಾರು ಯಾರ ಬ್ಯಾನರ್ ಹಾಕಿದ್ರೂ ಮೂರನೇ ವ್ಯಕ್ತಿ ತೆಗೆಯುವಂತಿಲ್ಲ. ಯಾರು ಕೂಡ ಆಯಾ ಆಡಳಿತದಿಂದ ಅನುಮತಿ ಪಡೆದು ಬ್ಯಾನರ್ ಹಾಕಬಹುದು. ಬ್ಯಾನರ್ ಹಾಕುವವರು ಉತ್ತಮ ಉದ್ದೇಶದಿಂದ ಹೊಂದಿರಬೇಕು ಅಷ್ಟೇ. ಉದ್ದೇಶ, ದುರುದ್ದೇಶ ಎರಡನ್ನೂ ಇಲ್ಲಿ ಗಮನಿಸಬೇಕು ಎಂದು ಯು.ಟಿ ಖಾದರ್ ಹೇಳಿದರು.
ಆದರೆ ಮಡಿಕೇರಿಯಲ್ಲಿ ಆಗಿರುವ ಘಟನೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ವಿಪಕ್ಷ ನಾಯಕರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಜವಾಬ್ದಾರಿ. ಬಿಜೆಪಿ ಆಡಳಿತದಲ್ಲಿ ಪೊಲೀಸ್ ಇಲಾಖೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ರಾಜಕೀಯ ಪಕ್ಷದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಯಲ್ಲಿ ಕೊಟ್ಟು ಸರ್ಕಾರ ಮೌನವಾಗಿ ಕುಳಿತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
Mangalore Congress party has never said Savarkar is not a freedom fighter says MLA UT Khader
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm