ಬ್ರೇಕಿಂಗ್ ನ್ಯೂಸ್
19-08-22 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19 : ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. 1924ರ ನಂತರ ಸಾವರ್ಕರ್ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆ ಇದೆಯಾ ? ಆಬಳಿಕ ಸಾವರ್ಕರ್ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. ಈ ಬಗ್ಗೆ ಮಾತ್ರ ಕಾಂಗ್ರೆಸ್ ಪ್ರಶ್ನೆ ಇರುವುದು. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದರು.

ಹಾಗೆಂದು, ಸಿದ್ದರಾಮಯ್ಯ ಯಾರಿಗೂ ಆಕ್ರೋಶ ಬರುವಂತೆ ಹೇಳಿಕೆಯನ್ನು ಕೊಟ್ಟಿಲ್ಲ. ಬ್ಯಾನರ್ ಹಾಕಿದ್ದಕ್ಕೆ ಆಕ್ಷೇಪ ಮಾಡಿಲ್ಲ. ಆದರೆ ಬ್ಯಾನರ್ ಹಾಕಿದ್ದವರ ಉದ್ದೇಶದ ಬಗ್ಗೆ ಮಾತಾಡಿದ್ದರು. ಯಾರು ಯಾರ ಬ್ಯಾನರ್ ಹಾಕಿದ್ರೂ ಮೂರನೇ ವ್ಯಕ್ತಿ ತೆಗೆಯುವಂತಿಲ್ಲ. ಯಾರು ಕೂಡ ಆಯಾ ಆಡಳಿತದಿಂದ ಅನುಮತಿ ಪಡೆದು ಬ್ಯಾನರ್ ಹಾಕಬಹುದು. ಬ್ಯಾನರ್ ಹಾಕುವವರು ಉತ್ತಮ ಉದ್ದೇಶದಿಂದ ಹೊಂದಿರಬೇಕು ಅಷ್ಟೇ. ಉದ್ದೇಶ, ದುರುದ್ದೇಶ ಎರಡನ್ನೂ ಇಲ್ಲಿ ಗಮನಿಸಬೇಕು ಎಂದು ಯು.ಟಿ ಖಾದರ್ ಹೇಳಿದರು.
ಆದರೆ ಮಡಿಕೇರಿಯಲ್ಲಿ ಆಗಿರುವ ಘಟನೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ವಿಪಕ್ಷ ನಾಯಕರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಜವಾಬ್ದಾರಿ. ಬಿಜೆಪಿ ಆಡಳಿತದಲ್ಲಿ ಪೊಲೀಸ್ ಇಲಾಖೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ರಾಜಕೀಯ ಪಕ್ಷದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಯಲ್ಲಿ ಕೊಟ್ಟು ಸರ್ಕಾರ ಮೌನವಾಗಿ ಕುಳಿತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
Mangalore Congress party has never said Savarkar is not a freedom fighter says MLA UT Khader
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm