ಬ್ರೇಕಿಂಗ್ ನ್ಯೂಸ್
22-08-22 01:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22 : ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು, ಜಟಾಪಟಿಯ ನಡುವಲ್ಲೇ ಶೈಕ್ಷಣಿಕ ವರ್ಷ ಮುಗಿದು ಹೋಗಿದೆ. ಈಗ ಹೊಸತಾಗಿ ಅಡ್ಮಿಷನ್ ಶುರುವಾಗಿ ತರಗತಿ ಆರಂಭಗೊಂಡಿದೆ. ಆದರೆ, ಈ ನಡುವೆ ಹಿಜಾಬ್ ಕಾರಣಕ್ಕೆ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಸರಕಾರಿ ಕಾಲೇಜು ತೊರೆಯುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಈ ಬಾರಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ 145 ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಖಾಸಗಿ ಕಾಲೇಜುಗಳಿಗೆ ತೆರಳಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ವ್ಯಾಪ್ತಿಯ ಕಾಲೇಜುಗಳಲ್ಲಿ 900ಕ್ಕೂ ಮುಸ್ಲಿಂ ವಿದ್ಯಾರ್ಥಿನಿಯರಿದ್ದು ಈ ಪೈಕಿ 145 ಮಂದಿ ಕಾಲೇಜು ತೊರೆದಿದ್ದಾರೆ.

ಸುಮಾರು 16 ಶೇಕಡಾ ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಹಿಂಪಡೆದಿದ್ದಾರೆ ಎನ್ನಲಾಗುತ್ತಿದೆ. ಕಾಲೇಜು ನಿಯಮಕ್ಕೆ ಬದ್ಧರಾಗಿ ನಡೆದುಕೊಳ್ಳಲು ಸಾಧ್ಯವಾಗದವರು ಟಿಸಿ ಪಡೆದು ಹೋಗಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಹೇಳಿದ್ದರು. ಮಂಗಳೂರಿನ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಆಗಿದ್ದಾಗ ವಿದ್ಯಾರ್ಥಿನಿಯರು ಜಿಲ್ಲಾಡಳಿತದ ಕದ ತಟ್ಟಿದ್ದರು. ಮಂಗಳೂರು ವಿವಿಯ ಉಪ ಕುಲಪತಿಗೂ ದೂರು ನೀಡಿದ್ದರು. ಆದರೆ ಸಿಂಡಿಕೇಟ್ ನಿರ್ಣಯ ಆಗಿದೆ, ನಾವೇನು ಮಾಡುವಂತಿಲ್ಲ ಎಂದು ವಿಸಿಯವರು ನಿರಾಕರಣೆ ಮಾಡಿದ್ದರು.
ಇದೇ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಿದ್ದಾರೆ. ಸರ್ಕಾರಿ ಕಾಲೇಜಿನಿಂದ 34 ಶೇ., ಅನುದಾನಿತ ಕಾಲೇಜಿನಿಂದ 13 ಶೇ. ವಿದ್ಯಾರ್ಥಿನಿಯರು ಟಿಸಿ ಪಡೆದಿದ್ದಾರೆಂದು ಈ ಕುರಿತ ಆರ್ಟಿಐ ಪ್ರಶ್ನೆಗೆ ರಾಜ್ಯ ಶಿಕ್ಷಣ ಇಲಾಖೆ ಉತ್ತರ ನೀಡಿದೆ.
ಶಿಕ್ಷಣ ಸಚಿವ ಬಿಸಿ ನಾಗೇಶ್ ಕಾರಣ..

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿಜಾಬ್ ಪರ ಹೋರಾಟಗಾರ್ತಿ ಗೌಸಿಯಾ, ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಎಂದು ದೂರಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ವಿದ್ಯಾರ್ಥಿನಿಯರು ಟಿಸಿ ಪಡೆದು ಖಾಸಗಿ ಕಾಲೇಜು ಸೇರುತ್ತಿದ್ದಾತೆ. ಈ ರೀತಿಯ ಬೆಳವಣಿಗೆ ಸಚಿವ ಬಿ.ಸಿ. ನಾಗೇಶ್ ಕಾರಣ. ಸಂವಿಧಾನದ ಹಕ್ಕಿನಂತೆ ಶಿಕ್ಷಣ ಪಡೆಯಲು ರಾಜ್ಯ ಸರಕಾರ ಬಿಡಲಿಲ್ಲ. ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ಮಾಡಿದ್ದಾರೆ. ಇದರಿಂದ ಹಲವು ಸರ್ಕಾರಿ ಕಾಲೇಜುಗಳಿಗೆ ನಷ್ಟವಾಗಲಿದೆ. ರಾಜ್ಯಾದ್ಯಂತ 30 ಶೇ. ಅಧಿಕ ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದಾರೆ. ಅದೆಷ್ಟೋ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನೇ ಮೊಟಕುಗೊಳಿಸಿದ್ದಾರೆ. ಇದಕ್ಕೆಲ್ಲ ಬಿಜೆಪಿ ಸರಕಾರ ಕಾರಣ ಎಂದು ದೂರಿದ್ದಾರೆ. ಗೌಸಿಯಾ ಹಂಪನಕಟ್ಟೆ ವಿವಿ ಕಾಲೇಜಿನಿಂದ ಟಿಸಿ ಪಡೆದು ಖಾಸಗಿ ಕಾಲೇಜು ಸೇರಿದ್ದಾರೆ.
Hijab fight, Muslims girl leaving government college in Mangalore increases.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm