ಬ್ರೇಕಿಂಗ್ ನ್ಯೂಸ್
05-10-20 08:13 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಜಿಲ್ಲೆಯಲ್ಲಿ ಅಕ್ರಮ ಗೋ ಕಳ್ಳತನ, ಗೋಹತ್ಯೆ ಹೆಚ್ಚುತ್ತಿದ್ದು ಜಿಲ್ಲಾಡಳಿತ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾದರೆ ಬಜರಂಗದಳ ಕಾರ್ಯಕರ್ತರು ರಸ್ತೆಗಿಳಿಯಬೇಕಾಗುತ್ತದೆ. ಕಾರ್ಯಕರ್ತರೇ ಗೋಹತ್ಯೆಗೆ ನಿಯಂತ್ರಣ ಹೇರಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಶರಣ್ ಪಂಪ್ವೆಲ್ ಎಚ್ಚರಿಸಿದ್ದಾರೆ.
ಮಂಗಳೂರಿನ ಕದ್ರಿಯಲ್ಲಿರುವ ವಿಹಿಂಪ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಶರಣ್ ಪಂಪ್ವೆಲ್, ಜಿಲ್ಲೆಯಲ್ಲಿ ಇನ್ನೂ ಗೋ ಕಳ್ಳತನ, ಅಕ್ರಮ ಗೋ ಹತ್ಯೆ ಮುಂದುವರಿದ್ರೆ ಬಜರಂಗದಳ ಸಹಿಸಲ್ಲ. ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಳೆದ ಒಂದು ತಿಂಗಳಲ್ಲಿ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಅಕ್ರಮ ಗೋಸಾಗಾಟ ವಿಚಾರದಲ್ಲಿ ಹಲವಾರು ಪ್ರಕರಣ ದಾಖಲಾಗಿದೆ. ಹಿಂದೆಲ್ಲಾ ಟೆಂಪೋದಲ್ಲಿ ಗೋಸಾಗಾಟ ನಡೆಯುತ್ತಿತ್ತು. ಈಗ, ಸ್ವಿಫ್ಟ್ ಕಾರು, ಇನ್ನೋವಾಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ. ಗೋಸಾಗಣೆ ಮಾಫಿಯಾ ಹಿಂದೆ ದೊಡ್ಡ ಜಾಲವೇ ಇದೆ. ಇದನ್ನು ಹತ್ತಿಕ್ಕಲು ಪೊಲೀಸ್ ಇಲಾಖೆ ವಿಶೇಷ ರೀತಿಯ ತಂಡ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಅಕ್ರಮ ಗೋಸಾಗಾಟ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎರಡು ದಿನಗಳ ಹಿಂದೆ ಟೆಂಪೋದಲ್ಲಿ ದನ ಸಾಗಾಟ ಮಾಡುತ್ತಿದ್ದಾಗ ಐದಾರು ಕರುಗಳು ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟಿದ್ದವು. ಕುದ್ರೋಳಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಕರುಗಳು ರಸ್ತೆಗೆ ಬಿದ್ದು ನರಳಾಡಿದ್ದವು. ಇದನ್ನು ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೂ, ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಇಂತಹ ಕೃತ್ಯಗಳು ಮುಂದುವರಿದರೆ ಬಜರಂಗದಳ ಸುಮ್ಮನಿರಲ್ಲ. ಇದರಿಂದ ಜಿಲ್ಲೆಯ ಶಾಂತಿ ಕದಡಿದರೆ ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಬೇಕು ಎಂದು ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ಬಜರಂಗದಳ ಸಂಚಾಲಕ ಭುಜಂಗ ಕುಲಾಲ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷ ಮನೋಹರ ಸುವರ್ಣ, ಪ್ರದೀಪ್ ಪಂಪ್ವೆಲ್, ಗುರುಪ್ರಸಾದ್ ಉಳ್ಳಾಲ್ ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am