ಬ್ರೇಕಿಂಗ್ ನ್ಯೂಸ್
24-08-22 11:43 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಪ್ರಾಣಾಪಾಯ ಹೆಚ್ಚುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆಯಲು ಸ್ಪರ್ಧೆ ಹಮ್ಮಿಕೊಂಡಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳ ಅಪಾಯಕಾರಿ ಗುಂಡಿಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ, 5,000 ರೂ. ಬಹುಮಾನ ಗೆಲ್ಲಿ ಎಂದು ಸ್ಪರ್ಧೆ ಏರ್ಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಐವನ್ ಡಿ’ಸೋಜ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳೇ ಜಾಸ್ತಿಯಾಗಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ, ಮಹಾನಗರ ಪಾಲಿಕೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಆಡಳಿತ ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ರಸ್ತೆ ಗುಂಡಿಗಳ ಬಗ್ಗೆಯೇ ಫೋಟೊ ಸ್ಪರ್ಧೆ ಆಯೋಜಿಸಿದ್ದೇವೆ ಎಂದರು.

ಸ್ಪರ್ಧೆ ಆ.24 ರಿಂದ ಆ.28ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಮಂಗಳೂರು ನಗರದ ಸ್ಮಾರ್ಟ್ ಸಿಟಿ ವ್ಯಾಪ್ತಿಯ ಅತ್ಯಂತ ದೊಡ್ಡ ಮತ್ತು ಅಪಾಯಕಾರಿ ಗುಂಡಿ ಗುರುತಿಸಿದ ಮೂವರು ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.


ಪ್ರಥಮ ಬಹುಮಾನವನ್ನು ದ.ಕ ಜಿಲ್ಲಾ ಕಾರ್ಮಿಕ ಪರಿಷತ್ ಬಸ್ ಸಂಘದ ನೌಕರರ ವತಿಯಿಂದ 5 ಸಾವಿರ ರೂ., ದ್ವಿತೀಯ ಬಹುಮಾನ ತ್ರಿಚಕ್ರ, ಗೂಡ್ಸ್, ಟೆಂಪೋ ಮಾಲಕ/ಚಾಲಕರ ಸಂಘದ ವತಿಯಿಂದ 3 ಸಾವಿರ ರೂ, ತೃತೀಯ ಬಹುಮಾನವಾಗಿ ಕುಲಶೇಖರ ಮಹಿಳಾ ದ್ವಿಚಕ್ರ ವಾಹನ ಚಾಲಕ/ಮಾಲಕರ ಪರವಾಗಿ 2 ಸಾವಿರ ರೂ. ನೀಡಲು ತೀರ್ಮಾನಿಸಿದ್ದೇವೆ. ಗುಂಡಿ ಸ್ಪರ್ಧೆಯಲ್ಲಿ ಭಾಗವಹಿಸುವವರು 9731485875 ವಾಟ್ಸಪ್ ಸಂಖ್ಯೆಗೆ ಗುಂಡಿಗಳ ಚಿಕ್ಕ ವೀಡಿಯೋ, ಫೋಟೋ ಮತ್ತು ಜಿಪಿಎಸ್ ಲೊಕೇಷನ್ ಅನ್ನು ಕಳುಹಿಸಿಕೊಡತಕ್ಕದ್ದು, ಇದು ಮನೋರಂಜನೆಗೆ ಅಲ್ಲ, ಜನಜಾಗೃತಿ ಕಾರ್ಯಕ್ರಮ. ಆ.30 ರಂದು ಪಾಲಿಕೆ ಕಚೇರಿ ಮುಂದೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.
Worst potholes in Mangalore send WhatsApp pictures and get price money of 5000 Rs says congress leader Ivan Dsouza.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am