ಬ್ರೇಕಿಂಗ್ ನ್ಯೂಸ್
24-08-22 11:43 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಪ್ರಾಣಾಪಾಯ ಹೆಚ್ಚುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆಯಲು ಸ್ಪರ್ಧೆ ಹಮ್ಮಿಕೊಂಡಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳ ಅಪಾಯಕಾರಿ ಗುಂಡಿಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ, 5,000 ರೂ. ಬಹುಮಾನ ಗೆಲ್ಲಿ ಎಂದು ಸ್ಪರ್ಧೆ ಏರ್ಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಐವನ್ ಡಿ’ಸೋಜ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳೇ ಜಾಸ್ತಿಯಾಗಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ, ಮಹಾನಗರ ಪಾಲಿಕೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಆಡಳಿತ ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ರಸ್ತೆ ಗುಂಡಿಗಳ ಬಗ್ಗೆಯೇ ಫೋಟೊ ಸ್ಪರ್ಧೆ ಆಯೋಜಿಸಿದ್ದೇವೆ ಎಂದರು.

ಸ್ಪರ್ಧೆ ಆ.24 ರಿಂದ ಆ.28ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಮಂಗಳೂರು ನಗರದ ಸ್ಮಾರ್ಟ್ ಸಿಟಿ ವ್ಯಾಪ್ತಿಯ ಅತ್ಯಂತ ದೊಡ್ಡ ಮತ್ತು ಅಪಾಯಕಾರಿ ಗುಂಡಿ ಗುರುತಿಸಿದ ಮೂವರು ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.


ಪ್ರಥಮ ಬಹುಮಾನವನ್ನು ದ.ಕ ಜಿಲ್ಲಾ ಕಾರ್ಮಿಕ ಪರಿಷತ್ ಬಸ್ ಸಂಘದ ನೌಕರರ ವತಿಯಿಂದ 5 ಸಾವಿರ ರೂ., ದ್ವಿತೀಯ ಬಹುಮಾನ ತ್ರಿಚಕ್ರ, ಗೂಡ್ಸ್, ಟೆಂಪೋ ಮಾಲಕ/ಚಾಲಕರ ಸಂಘದ ವತಿಯಿಂದ 3 ಸಾವಿರ ರೂ, ತೃತೀಯ ಬಹುಮಾನವಾಗಿ ಕುಲಶೇಖರ ಮಹಿಳಾ ದ್ವಿಚಕ್ರ ವಾಹನ ಚಾಲಕ/ಮಾಲಕರ ಪರವಾಗಿ 2 ಸಾವಿರ ರೂ. ನೀಡಲು ತೀರ್ಮಾನಿಸಿದ್ದೇವೆ. ಗುಂಡಿ ಸ್ಪರ್ಧೆಯಲ್ಲಿ ಭಾಗವಹಿಸುವವರು 9731485875 ವಾಟ್ಸಪ್ ಸಂಖ್ಯೆಗೆ ಗುಂಡಿಗಳ ಚಿಕ್ಕ ವೀಡಿಯೋ, ಫೋಟೋ ಮತ್ತು ಜಿಪಿಎಸ್ ಲೊಕೇಷನ್ ಅನ್ನು ಕಳುಹಿಸಿಕೊಡತಕ್ಕದ್ದು, ಇದು ಮನೋರಂಜನೆಗೆ ಅಲ್ಲ, ಜನಜಾಗೃತಿ ಕಾರ್ಯಕ್ರಮ. ಆ.30 ರಂದು ಪಾಲಿಕೆ ಕಚೇರಿ ಮುಂದೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.
Worst potholes in Mangalore send WhatsApp pictures and get price money of 5000 Rs says congress leader Ivan Dsouza.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm